Homeಮುಖಪುಟಜನತಾ ಕರ್ಫ್ಯೂ ನಂತರ ಅಥವಾ ಮೊದಲು ಶಾಖೆ ನಡೆಸಲು ಆರೆಸ್ಸೆಸ್ ಕರೆ : ಉಳಿದ ಸಮಯದಲ್ಲಿ...

ಜನತಾ ಕರ್ಫ್ಯೂ ನಂತರ ಅಥವಾ ಮೊದಲು ಶಾಖೆ ನಡೆಸಲು ಆರೆಸ್ಸೆಸ್ ಕರೆ : ಉಳಿದ ಸಮಯದಲ್ಲಿ ವೈರಸ್‌ ಹರಡುವುದಿಲ್ಲವೇ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಾರ್ವಜನಿಕ ಕರ್ಫ್ಯೂಗಾಗಿ ಕರೆ ನೀಡಿದ್ದನ್ನು ಗಮನದಲ್ಲಿಟ್ಟುಕೊಂಡು ಆರೆಸ್ಸೆಸ್ ಶಾಖೆಗಳನ್ನು ಬೆಳಿಗ್ಗೆ 6.30 ಕ್ಕೆ ಮೊದಲು ಅಥವಾ ಭಾನುವಾರ ರಾತ್ರಿ 9.30 ರ ನಂತರ ನಡೆಸಲಾಗುವುದು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿಕೆ ನೀಡಿದ್ದಾರೆ.

“ಸ್ವಯಂಸೇವಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ತಮ್ಮ ಪ್ರದೇಶಲ್ಲಿ ಒಟ್ಟುಗೂಡಬಹುದು ಮತ್ತು ಪ್ರಾರ್ಥಿಸಬಹುದು” ಎಂದು ಜೋಶಿ ಹೇಳಿದ್ದಾರೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಸಮಯದಲ್ಲಿ ಜನರು ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಿಂದ ದೂರವಿರಲು ಪ್ರಧಾನ ಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದರು.

ವೈರಸ್ ಹರಡುವುದನ್ನು ತಡೆಯಲು ಸಭೆಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ದೇಶನದ ನಂತರ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ಕಳೆದ ವಾರ ರದ್ದುಗೊಳಿಸಿತ್ತು. ವೈರಸ್ ಹರಡುವುದನ್ನು ತೆಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲು ಎಲ್ಲಾ ರಾಜ್ಯ ಘಟಕಗಳಿಗೆ ಸೂಚನೆಗಳನ್ನು ಆರೆಸ್ಸೆಸ್ ನೀಡಿದೆ ಎನ್ನಲಾಗಿದೆ. ಆದರೆ ಕೆಲವು ಪ್ರದೇಶಗಳ ಜಿಲ್ಲೆ ಹಾಗೂ ರಾಜ್ಯ ಘಟಕಗಳು ಭಾನುವಾರ ಶಾಖೆಗಳಲ್ಲಿ ಅನುಸರಿಸಬೇಕಾದ ಕಾರ್ಯಕ್ರಮಗಳು ರೂಪಿಸಿದೆ.

ಇಡೀ ದೇಶವೇ ಕೊರೊನ ಭೀತಿಯಲ್ಲಿರುವಾಗ ಇವರು ಶಾಖೆಗಳನ್ನು ನಡೆಸುವುದಾದರೂ ಏಕೆ? ಇವರು ಶಾಖೆಗಳನ್ನು ಜನತಾ ಕರ್ಫ್ಯೂ ಪ್ರಾರಂಭ ಅಥವಾ ಮುಗಿದ ನಂತರ ಮಾಡಿದರೆ ಸೋಂಕು ಹರಡುವುದಿಲ್ಲವೇ ? ಸರಕಾರದ ಆದೇಶವನ್ನು ಮೀರಿ ಸಭೆ ಸೇರುವುದು ಸರಿಯೇ? ಸಾರ್ವಜನಿಕರಿಗೊಂದು ನ್ಯಾಯ? ಆರ್‌ಎಸ್‌ಎಸ್‌ಗೆ ಒಂದು ನ್ಯಾಯ ಸರಿಯೇ? ಶಾಖೆಗಳಲ್ಲಿ ನೂರಾರು ಜನ ಸೇರುವುದು ಅಪಾಯಕ್ಕೆ ಆಸ್ಪದವಲ್ಲವೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...