Homeಕರ್ನಾಟಕಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸೇವಾಲಾಲ್‌ರ ವಿಚಾರಗಳಿಗೂ ಆರ್‌ಎಸ್‌ಎಸ್‌ ಚಿಂತನೆಗೂ ಯಾವುದೇ ಸಂಬಂಧವಿಲ್ಲ ಎಂದು ಬಂಜಾರ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಸೇವಾಲಾಲ್ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್ ಶಿಬಿರ ನಡೆಸಲು ಮುಂದಾಗಿರುವುದಕ್ಕೆ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್ ಚಿಂತನೆಗಳಿಗೂ ಸಂತ ಸೇವಾಲಾಲರ ವಿಚಾರಗಳಿಗೂ ಯಾವುದೇ ಸಂಬಂಧವಿಲ್ಲ. ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಆರ್‌ಎಸ್‌ಎಸ್‌ಗೆ ಸೇರಿದವನು. ಮಕ್ಕಳಿಗೆ ಬಂದೂಕು ನೀಡಿ ತರಬೇತಿ ಕೊಡುವ ಕೆಲಸವನ್ನು ಸಂಘಪರಿವಾರ ಮಾಡುತ್ತಿದೆ. ಸೇವಾಲಲ್‌ರ ಚಿಂತನೆಗಳು, ಆರ್‌ಎಸ್‌ಎಸ್‌ ಚಿಂತನೆಗಳಿಗೂ ಯಾವುದೇ ಸಂಬಂಧವಿಲ್ಲ. ಅವರ ಜನ್ಮಸ್ಥಳದಲ್ಲಿ ಶಿಬಿರ ನಡೆಸಬಾರದು ಎಂದು ಆಗ್ರಹಿಸಲಾಗುತ್ತಿದೆ.

ಸೆಪ್ಟೆಂಬರ್‌ 11ರಿಂದ 19ರವರೆಗೆ ಆರ್‌ಎಸ್‌ಎಸ್, ‘ಉದ್ಯೋಗಿ ಪ್ರಾಥಮಿಕ ಶಿಕ್ಷಣ ವರ್ಗ’ ಎಂಬ ಕಾರ್ಯಕ್ರಮವನ್ನು ಮಠದಲ್ಲಿ ಹಮ್ಮಿಕೊಂಡಿದೆ. ಬಂಜಾರ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ‌ ಮಾಡಬಾರದು ಎಂದು ಸೇವಾಲಾಲ್ ಸಮಿತಿಯವರು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದಲ್ಲಿ ಕೋಮುವಾದ ಹರಡುತ್ತಿರುವ ಆರ್‌ಎಸ್ಎಸ್ ಎನ್ನುವ ಸಂಘಟನೆ ದಲಿತ, ಬಂಜಾರರ ಮೇಲೆ ದೌರ್ಜನ್ಯ ಎಸಗುತ್ತಲೇ ಬಂದಿದೆ‌. ಆರ್‌ಎಸ್‌ಎಸ್ ಶಿಬಿರ ಆಯೋಜನೆಗೆ ಅವಕಾಶ ಮಾಡಿಕೊಡಬಾರದು ಎಂದು ಕರುನಾಡು ಬಂಜಾರ ಸೇವಾ ಸೇನೆಯ ರಾಜ್ಯಾಧ್ಯಕ್ಷ ಲಕ್ಷ್ಮಣ್ ರಾಮಾವತ್ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ದಲಿತರಿಗೆ, ಬಂಜಾರರಿಗೆ ಮೀಸಲಾತಿ ನೀಡಿರುವುದನ್ನು, ಭಾರತದ ಸಂವಿಧಾನವನ್ನು ಒಪ್ಪದಿರುವ ಆರ್‌ಎಸ್‌ಎಸ್‌ನ ಶಿಬಿರ ಏರ್ಪಡಿಸಿರುವುದು ನ್ಯಾಯ ಸಮ್ಮತವಲ್ಲ. ಸಮುದಾಯದಲ್ಲಿ ತಾವೇ ನಾಯಕರೆಂದು ಬಿಂಬಿಸಿಕೊಂಡು ಆರ್‌ಎಸ್‌ಎಸ್ ಓಲೈಕೆ ಮಾಡಲು ಶಾಸಕ ಪಿ.ರಾಜೀವ್‌ ಏಕಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಸಮುದಾಯವನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

“ಸಚಿವ ಪ್ರಭು ಚೌವ್ಹಾಣ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಪ್ಲಾನ್‌ ಮಾಡಿದ್ದಾರೆ. ಸಚಿವ ಸ್ಥಾನ ಪಡೆಯಲು ಬಂಜಾರ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದರು.

“ಆರ್‌ಎಸ್‌ಎಸ್ ಓಲೈಕೆಗಾಗಿ ಪಿ. ರಾಜೀವ್ ಶಿಬಿರ ಆಯೋಜನೆ ಮಾಡಿಕೊಟ್ಟಿರುವುದು ಅಕ್ಷಮ್ಯ ಅಪರಾಧ. ರಾಜೀವ್ ಅವರನ್ನು ಬಹಿಷ್ಕರಿಸಬೇಕು. ಕೋಮುವಾದಿ ಸಂಘಟನೆಗಳಿಗೆ ಮಠದಲ್ಲಿ ಅವಕಾಶ‌ ಕೊಟ್ಟರೆ ನಾವು ಸುಮ್ಮನಿರಲ್ಲ. ಸೇವಾಲಾಲ್ ಜನ್ಮಸ್ಥಳ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ ಆದರೆ ಬಂಜಾರ ಅಸ್ಮಿತೆಯನ್ನು ನಾಶಪಡಿಸಿದಂತೆ” ಎಂದು ಆತಂಕ ವ್ಯಕ್ತಪಡಿಸಿದರು.

“ಮಹಾಮಠದಲ್ಲಿ ಯಾವುದೇ ರಾಜಕೀಯ ಸಂಘಟನೆಗಳಿಗೆ ಅವಕಾಶ ಕೊಡುವುದಿಲ್ಲ. ಇಲ್ಲಿಯವರೆಗೆ ಯಾವುದೇ ಪಕ್ಷದ ಸಮ್ಮೇಳನ, ಸಂಘಟನೆಗಳಿಗೆ ಅವಕಾಶ ನೀಡಿಲ್ಲ.‌ ಇಂದು ಆರ್‌ಎಸ್‌ಎಸ್‌ನವರು ಬಂದಿದ್ದಾರೆ. ನಾಳೆ ಬಿಜೆಪಿಯವರು, ನಾಡಿದ್ದು ಕಾಂಗ್ರೆಸ್‌ನವರು ಬರುತ್ತಾರೆ. ಹೀಗಾಗಲು ಬಿಡುವುದಿಲ್ಲ. ಈ ಶಿಬಿರ ನಿಲ್ಲದಿದ್ದರೆ ಸೇವಾಲಾಲ್ ಜನ್ಮಸ್ಥಳದ‌ ಎದುರು ಹೋರಾಟ ಮಾಡುವುದು ನಿಶ್ಚಿತ” ಎಂದು ಎಚ್ಚರಿಕೆ ನೀಡಿದರು.

ಸೂರಗೊಂಡನಕೊಪ್ಪ ಬಂಜಾರರ ಧಾರ್ಮಿಕ ಕ್ಷೇತ್ರ. ಇಲ್ಲಿ ನಮ್ಮ ವೃದ್ಧರಿಗೆ, ಭಕ್ತಾದಿಗಳಿಗೆ ಆಶ್ರಯ ಕೊಡಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಇಲ್ಲಿ ತೆರೆಯಬೇಕು ಎಂಬುದು ನಮ್ಮ ಉದ್ದೇಶ. ಇದನ್ನು ಮಾಡುವುದು ಬಿಟ್ಟು ಮತೀಯವಾದಿ ಸಂಘಟನೆಯ ಶಿಬಿರ ನಡೆಸಲು ಮುಂದಾಗಿದ್ದಾರೆ ಎಂದರು.

“ಸಮುದಾಯದ ಜನಪ್ರತಿನಿಧಿಗಳು ಈ ಕುರಿತು ಪ್ರತಿಕ್ರಿಯೆ ನೀಡಬೇಕಿದೆ. ನಾವು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಚರ್ಚೆ ಹುಟ್ಟಿಕೊಂಡಿದೆ. ಶಿಬಿರ ನಡೆಸಬೇಕೋ ಬೇಡವೋ ಎಂಬ ಚರ್ಚೆ ನಡೆಸಲು ಮಹಾಮಠ ಸಮಿತಿ ಆಗಸ್ಟ್‌ 21ರಂದು ಸಭೆ ನಡೆಸಲು ಮುಂದಾಗಿದೆ” ಎಂದು ಮಾಹಿತಿ ನೀಡಿದರು.

“ಸಂತ ಸೇವಾಲಾಲರ ಚಿಂತನೆಗೂ ಆರ್‌ಎಸ್‌ಎಸ್ ಚಿಂತನೆಗಳೂ ಯಾವುದೇ ಸಂಬಂಧವಿಲ್ಲ. ಆರ್‌ಎಸ್‌ಎಸ್‌ನವರಿಗೆ ನಮ್ಮ ಸಂಸ್ಕೃತಿಯ ಕುರಿತು ಒಂಚೂರು ಗೊತ್ತಿಲ್ಲ. ನಮ್ಮ ಸಂಸ್ಕೃತಿಯೇ ಬೇರೆ. ಅವರ ಸಂಸ್ಕೃತಿಯೇ ಬೇರೆ. ಮಕ್ಕಳ ಕೈಗೆ ಗನ್ ನೀಡಿ ಪ್ರಾಕ್ಟೀಸ್ ಮಾಡಿಸಿದ ಉದಾಹರಣೆಗಳನ್ನು ನೋಡಿದ್ದೇವೆ. ರಾಷ್ಟ್ರಪಿತ ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್‌ನವನು. ಆರ್‌ಎಸ್‌ಎಸ್‌ ಸಂಸ್ಕೃತಿಯನ್ನು ನಮ್ಮ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯನ್ನು ಅವರು ನಡೆಸಿದ್ದಾರೆ.

ಇದನ್ನೂ ಓದಿರಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಮತ್ತೊಬ್ಬ ಬಂಜಾರ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ಸೂರಗೊಂಡನಕೊಪ್ಪ ಇಡೀ ಬಂಜಾರ ಜನಾಂಗಕ್ಕೆ ಸೇರಿದ ಧಾರ್ಮಿಕ ಸ್ಥಳವೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಸ್ಥಿರಾಸ್ತಿಯಲ್ಲ. ಸೂರಗೊಂಡನಕೊಪ್ಪದಲ್ಲಿ ರೆಜಿಸ್ಟರ್ಡ್ ಮಹಾಮಠ ಸಮಿತಿಯಿದೆ. ಈ ರೀತಿಯ ಶಿಭಿರವನ್ನು ನಡೆಸುವುದಾದರೆ ಆ ಸಮಿತಿಗೆ ಮನವಿ ಮಾಡಬೇಕು, ಈ ಶಿಬಿರದ ಅಜೆಂಡಾ ಏನೆಂದು ತಿಳಿಸಬೇಕು. ಆಗ ಇದಕ್ಕೆ ಅನುಮತಿ ಕೊಡಬೇಕೋ ಬೇಡವೋ ಎನ್ನುವುದನ್ನು ಸಮಿತಿ ತೀರ್ಮಾನ ಮಾಡುತ್ತದೆ. ಅದನ್ನು ಬಿಟ್ಟು ಸಮಿತಿಯ ಅಪ್ಪಣೆಯೇ ಇಲ್ಲದೆ ಅವರ ಗಮನಕ್ಕೆ ಬಾರದೆಯೇ ಬಿತ್ತಿ ಪತ್ರಗಳನ್ನು ಪ್ರಿಂಟ್ ಮಾಡಿ ಹಂಚುತ್ತಾರೆಂದರೆ ಇದು ಅಕ್ಷಮ್ಯ ಅಪರಾಧ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯು ಕೂಡಲೇ ಕಾನೂನು ರೀತಿ ಕ್ರಮ ಜರುಗಿಸಬೇಕು ಇಲ್ಲವಾದರೆ ಮುಂದೆ ಬೇರೆ ಬೇರೆ ಸಂಘಟನೆಗಳು ಅಲ್ಲಿ ತಮ್ಮ ಸಿದ್ಧಾಂತವನ್ನು ಹೇರುವ ಕಾರ್ಯಕ್ರಮವನ್ನು ನಡೆಸಲು ಅನುಮತಿ ಕೇಳಿಕೊಂಡು ಬಂದಾಗ ಸಮಿತಿಯು ಅದರಿಂದಾಗುವ ವ್ಯತಿರಿಕ್ತ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಡೀ ಬಂಜಾರ ಸಮುದಾಯ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಪೇಚಿಗೆ ಸಿಕ್ಕಿಹಾಕಿಕೊಳ್ಳಬೇಕಾಗುತ್ತದೆ. ಈ ಹಿಂದೆ ಯಾವುದೇ ಪಕ್ಷದ ಆಡಳಿತವಿದ್ದರೂ ಅನೇಕ ಅಧ್ಯಕ್ಷರುಗಳು ಪಕ್ಷಾತೀತವಾಗಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿ ಮಾಡಿದ್ದಾರೆ. ಇಂದು ಸೂರಗೊಂಡನಕೊಪ್ಪದ ಭಾಯಾಘಡ್ ಈ ಹಂತಕ್ಕೆ ಬರಬೇಕಾದರೆ ಅನೇಕ ಅಧಿಕಾರಿಗಳ, ರಾಜಕಾರಣಿಗಳ, ಸನುದಾಯದ ಹಿರಿಯರ, ಸ್ಥಳೀಯರ ಪರಿಶ್ರಮವಿದೆ ಎನ್ನುವ ಅರಿವು ಎಲ್ಲರಲ್ಲೂ ಇರಲಿ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

9 COMMENTS

  1. ಬ್ರಾಹ್ಮಣರಲ್ಲದ, ಬೇರೆಲ್ಲಾ ಸಾದುಸಂತರ, ಸ್ವಾಮೀಜಿಗಳ, ಮಟಾದೀಶರ ಹೆಸರು ಮತ್ತು ಕೊಡುಗೆಯನ್ನು ನಿರ್ನಾಮ ಮಾಡಿ, ಮುಂದಿನ ಪೀಳಿಗೆಗೆ ಅವರ ಹೆಸರೂ ಸಹ ದಕ್ಕಬಾರದು, ಎಂಬುದು ಮನುವಾದಿಗಳ ಹಿಡನ್ ಅಜೆಂಡಾ. ಇದನ್ನು ಅವರು ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ.

  2. ಸರಿಯಾಗಿ ಹೇಳಿದರಿ ಬ್ರೋ …
    ಬಂಜಾರಾ ಸಮಾಜವನ್ನು SC ST ಯಿಂದ ತೆಗದಾಕಬೇಕು ಎಂಬ ಒಳಸಂಚು ಈ ಮನೊವಾದಿಗಳದೆ ಅಲ್ಲವೇ? ..

  3. ಸಂತ ಸೇವಾಲಾಲ್ ಅವರು ಬಂಜಾರ ಸಮುದಾಯದ ಆದರ್ಶ ಪುರುಷರಾಗಿದ್ದಾರೆ. ಅವರ ಚಿಂತನೆಗಳು ಸಮುದಾಯದ ಅಭಿವೃದ್ಧಿಗೆ ಕಾರಣವಾಗಿದೆ ಆದರೆ ಆರ್ ಎಸ್ ಎಸ್ ವಿಚಾರಧಾರೆಗಳು ಸಮಾಜದಲ್ಲಿ ಕೋಮುಗಲಭೆಯನ್ನು ಸೃಷ್ಟಿ ಮಾಡಿ ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿದ್ದಾರೆ ಇಂತಹ ಸಂಘಟನೆಗಳಿಂದ ಕಿಂಚಿತ್ತು ಪ್ರಯೋಜನವಾಗುವುದಿಲ್ಲ.

  4. RSS ಬಗ್ಗೆ ಬಂಜಾರ ಸಮುದಾಯಕ್ಕೆ ಪ್ರತ್ಯೇಕವಾಗಿ ಯುವಕರಿಗೆ ಸರಿಯಾದ ಮಾಹಿತಿ ನೀಡಬೇಕಾಗಿದೆ, RSS ಅದು ಒಂದು ಮನುವಾದಿ ಸಿದ್ಧಾಂತದ ಆಧಾರದಲ್ಲಿ ಸ್ಥಾಪಿಸಿಕೊಂಡ ಸಂಘಟನೆ ಅದು ಕಳೆದ 75 ವರ್ಷದಲ್ಲಿ ಈ ದೇಶದಲ್ಲಿ ಸಹೋದರತೆಯಿಂದ ಜೀವಿಸಲು ಯಾರನ್ನೂ ಬಿಡಲಿಲ್ಲ

  5. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರಿಯಬೇಡಿ

  6. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರೆಯಬೇಡಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...