Homeಕರ್ನಾಟಕಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸೇವಾಲಾಲ್‌ರ ವಿಚಾರಗಳಿಗೂ ಆರ್‌ಎಸ್‌ಎಸ್‌ ಚಿಂತನೆಗೂ ಯಾವುದೇ ಸಂಬಂಧವಿಲ್ಲ ಎಂದು ಬಂಜಾರ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಸೇವಾಲಾಲ್ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್ ಶಿಬಿರ ನಡೆಸಲು ಮುಂದಾಗಿರುವುದಕ್ಕೆ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್ ಚಿಂತನೆಗಳಿಗೂ ಸಂತ ಸೇವಾಲಾಲರ ವಿಚಾರಗಳಿಗೂ ಯಾವುದೇ ಸಂಬಂಧವಿಲ್ಲ. ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಆರ್‌ಎಸ್‌ಎಸ್‌ಗೆ ಸೇರಿದವನು. ಮಕ್ಕಳಿಗೆ ಬಂದೂಕು ನೀಡಿ ತರಬೇತಿ ಕೊಡುವ ಕೆಲಸವನ್ನು ಸಂಘಪರಿವಾರ ಮಾಡುತ್ತಿದೆ. ಸೇವಾಲಲ್‌ರ ಚಿಂತನೆಗಳು, ಆರ್‌ಎಸ್‌ಎಸ್‌ ಚಿಂತನೆಗಳಿಗೂ ಯಾವುದೇ ಸಂಬಂಧವಿಲ್ಲ. ಅವರ ಜನ್ಮಸ್ಥಳದಲ್ಲಿ ಶಿಬಿರ ನಡೆಸಬಾರದು ಎಂದು ಆಗ್ರಹಿಸಲಾಗುತ್ತಿದೆ.

ಸೆಪ್ಟೆಂಬರ್‌ 11ರಿಂದ 19ರವರೆಗೆ ಆರ್‌ಎಸ್‌ಎಸ್, ‘ಉದ್ಯೋಗಿ ಪ್ರಾಥಮಿಕ ಶಿಕ್ಷಣ ವರ್ಗ’ ಎಂಬ ಕಾರ್ಯಕ್ರಮವನ್ನು ಮಠದಲ್ಲಿ ಹಮ್ಮಿಕೊಂಡಿದೆ. ಬಂಜಾರ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ‌ ಮಾಡಬಾರದು ಎಂದು ಸೇವಾಲಾಲ್ ಸಮಿತಿಯವರು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದಲ್ಲಿ ಕೋಮುವಾದ ಹರಡುತ್ತಿರುವ ಆರ್‌ಎಸ್ಎಸ್ ಎನ್ನುವ ಸಂಘಟನೆ ದಲಿತ, ಬಂಜಾರರ ಮೇಲೆ ದೌರ್ಜನ್ಯ ಎಸಗುತ್ತಲೇ ಬಂದಿದೆ‌. ಆರ್‌ಎಸ್‌ಎಸ್ ಶಿಬಿರ ಆಯೋಜನೆಗೆ ಅವಕಾಶ ಮಾಡಿಕೊಡಬಾರದು ಎಂದು ಕರುನಾಡು ಬಂಜಾರ ಸೇವಾ ಸೇನೆಯ ರಾಜ್ಯಾಧ್ಯಕ್ಷ ಲಕ್ಷ್ಮಣ್ ರಾಮಾವತ್ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ದಲಿತರಿಗೆ, ಬಂಜಾರರಿಗೆ ಮೀಸಲಾತಿ ನೀಡಿರುವುದನ್ನು, ಭಾರತದ ಸಂವಿಧಾನವನ್ನು ಒಪ್ಪದಿರುವ ಆರ್‌ಎಸ್‌ಎಸ್‌ನ ಶಿಬಿರ ಏರ್ಪಡಿಸಿರುವುದು ನ್ಯಾಯ ಸಮ್ಮತವಲ್ಲ. ಸಮುದಾಯದಲ್ಲಿ ತಾವೇ ನಾಯಕರೆಂದು ಬಿಂಬಿಸಿಕೊಂಡು ಆರ್‌ಎಸ್‌ಎಸ್ ಓಲೈಕೆ ಮಾಡಲು ಶಾಸಕ ಪಿ.ರಾಜೀವ್‌ ಏಕಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಸಮುದಾಯವನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

“ಸಚಿವ ಪ್ರಭು ಚೌವ್ಹಾಣ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಪ್ಲಾನ್‌ ಮಾಡಿದ್ದಾರೆ. ಸಚಿವ ಸ್ಥಾನ ಪಡೆಯಲು ಬಂಜಾರ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದರು.

“ಆರ್‌ಎಸ್‌ಎಸ್ ಓಲೈಕೆಗಾಗಿ ಪಿ. ರಾಜೀವ್ ಶಿಬಿರ ಆಯೋಜನೆ ಮಾಡಿಕೊಟ್ಟಿರುವುದು ಅಕ್ಷಮ್ಯ ಅಪರಾಧ. ರಾಜೀವ್ ಅವರನ್ನು ಬಹಿಷ್ಕರಿಸಬೇಕು. ಕೋಮುವಾದಿ ಸಂಘಟನೆಗಳಿಗೆ ಮಠದಲ್ಲಿ ಅವಕಾಶ‌ ಕೊಟ್ಟರೆ ನಾವು ಸುಮ್ಮನಿರಲ್ಲ. ಸೇವಾಲಾಲ್ ಜನ್ಮಸ್ಥಳ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ ಆದರೆ ಬಂಜಾರ ಅಸ್ಮಿತೆಯನ್ನು ನಾಶಪಡಿಸಿದಂತೆ” ಎಂದು ಆತಂಕ ವ್ಯಕ್ತಪಡಿಸಿದರು.

“ಮಹಾಮಠದಲ್ಲಿ ಯಾವುದೇ ರಾಜಕೀಯ ಸಂಘಟನೆಗಳಿಗೆ ಅವಕಾಶ ಕೊಡುವುದಿಲ್ಲ. ಇಲ್ಲಿಯವರೆಗೆ ಯಾವುದೇ ಪಕ್ಷದ ಸಮ್ಮೇಳನ, ಸಂಘಟನೆಗಳಿಗೆ ಅವಕಾಶ ನೀಡಿಲ್ಲ.‌ ಇಂದು ಆರ್‌ಎಸ್‌ಎಸ್‌ನವರು ಬಂದಿದ್ದಾರೆ. ನಾಳೆ ಬಿಜೆಪಿಯವರು, ನಾಡಿದ್ದು ಕಾಂಗ್ರೆಸ್‌ನವರು ಬರುತ್ತಾರೆ. ಹೀಗಾಗಲು ಬಿಡುವುದಿಲ್ಲ. ಈ ಶಿಬಿರ ನಿಲ್ಲದಿದ್ದರೆ ಸೇವಾಲಾಲ್ ಜನ್ಮಸ್ಥಳದ‌ ಎದುರು ಹೋರಾಟ ಮಾಡುವುದು ನಿಶ್ಚಿತ” ಎಂದು ಎಚ್ಚರಿಕೆ ನೀಡಿದರು.

ಸೂರಗೊಂಡನಕೊಪ್ಪ ಬಂಜಾರರ ಧಾರ್ಮಿಕ ಕ್ಷೇತ್ರ. ಇಲ್ಲಿ ನಮ್ಮ ವೃದ್ಧರಿಗೆ, ಭಕ್ತಾದಿಗಳಿಗೆ ಆಶ್ರಯ ಕೊಡಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಇಲ್ಲಿ ತೆರೆಯಬೇಕು ಎಂಬುದು ನಮ್ಮ ಉದ್ದೇಶ. ಇದನ್ನು ಮಾಡುವುದು ಬಿಟ್ಟು ಮತೀಯವಾದಿ ಸಂಘಟನೆಯ ಶಿಬಿರ ನಡೆಸಲು ಮುಂದಾಗಿದ್ದಾರೆ ಎಂದರು.

“ಸಮುದಾಯದ ಜನಪ್ರತಿನಿಧಿಗಳು ಈ ಕುರಿತು ಪ್ರತಿಕ್ರಿಯೆ ನೀಡಬೇಕಿದೆ. ನಾವು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಚರ್ಚೆ ಹುಟ್ಟಿಕೊಂಡಿದೆ. ಶಿಬಿರ ನಡೆಸಬೇಕೋ ಬೇಡವೋ ಎಂಬ ಚರ್ಚೆ ನಡೆಸಲು ಮಹಾಮಠ ಸಮಿತಿ ಆಗಸ್ಟ್‌ 21ರಂದು ಸಭೆ ನಡೆಸಲು ಮುಂದಾಗಿದೆ” ಎಂದು ಮಾಹಿತಿ ನೀಡಿದರು.

“ಸಂತ ಸೇವಾಲಾಲರ ಚಿಂತನೆಗೂ ಆರ್‌ಎಸ್‌ಎಸ್ ಚಿಂತನೆಗಳೂ ಯಾವುದೇ ಸಂಬಂಧವಿಲ್ಲ. ಆರ್‌ಎಸ್‌ಎಸ್‌ನವರಿಗೆ ನಮ್ಮ ಸಂಸ್ಕೃತಿಯ ಕುರಿತು ಒಂಚೂರು ಗೊತ್ತಿಲ್ಲ. ನಮ್ಮ ಸಂಸ್ಕೃತಿಯೇ ಬೇರೆ. ಅವರ ಸಂಸ್ಕೃತಿಯೇ ಬೇರೆ. ಮಕ್ಕಳ ಕೈಗೆ ಗನ್ ನೀಡಿ ಪ್ರಾಕ್ಟೀಸ್ ಮಾಡಿಸಿದ ಉದಾಹರಣೆಗಳನ್ನು ನೋಡಿದ್ದೇವೆ. ರಾಷ್ಟ್ರಪಿತ ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್‌ನವನು. ಆರ್‌ಎಸ್‌ಎಸ್‌ ಸಂಸ್ಕೃತಿಯನ್ನು ನಮ್ಮ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯನ್ನು ಅವರು ನಡೆಸಿದ್ದಾರೆ.

ಇದನ್ನೂ ಓದಿರಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಮತ್ತೊಬ್ಬ ಬಂಜಾರ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ಸೂರಗೊಂಡನಕೊಪ್ಪ ಇಡೀ ಬಂಜಾರ ಜನಾಂಗಕ್ಕೆ ಸೇರಿದ ಧಾರ್ಮಿಕ ಸ್ಥಳವೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಸ್ಥಿರಾಸ್ತಿಯಲ್ಲ. ಸೂರಗೊಂಡನಕೊಪ್ಪದಲ್ಲಿ ರೆಜಿಸ್ಟರ್ಡ್ ಮಹಾಮಠ ಸಮಿತಿಯಿದೆ. ಈ ರೀತಿಯ ಶಿಭಿರವನ್ನು ನಡೆಸುವುದಾದರೆ ಆ ಸಮಿತಿಗೆ ಮನವಿ ಮಾಡಬೇಕು, ಈ ಶಿಬಿರದ ಅಜೆಂಡಾ ಏನೆಂದು ತಿಳಿಸಬೇಕು. ಆಗ ಇದಕ್ಕೆ ಅನುಮತಿ ಕೊಡಬೇಕೋ ಬೇಡವೋ ಎನ್ನುವುದನ್ನು ಸಮಿತಿ ತೀರ್ಮಾನ ಮಾಡುತ್ತದೆ. ಅದನ್ನು ಬಿಟ್ಟು ಸಮಿತಿಯ ಅಪ್ಪಣೆಯೇ ಇಲ್ಲದೆ ಅವರ ಗಮನಕ್ಕೆ ಬಾರದೆಯೇ ಬಿತ್ತಿ ಪತ್ರಗಳನ್ನು ಪ್ರಿಂಟ್ ಮಾಡಿ ಹಂಚುತ್ತಾರೆಂದರೆ ಇದು ಅಕ್ಷಮ್ಯ ಅಪರಾಧ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯು ಕೂಡಲೇ ಕಾನೂನು ರೀತಿ ಕ್ರಮ ಜರುಗಿಸಬೇಕು ಇಲ್ಲವಾದರೆ ಮುಂದೆ ಬೇರೆ ಬೇರೆ ಸಂಘಟನೆಗಳು ಅಲ್ಲಿ ತಮ್ಮ ಸಿದ್ಧಾಂತವನ್ನು ಹೇರುವ ಕಾರ್ಯಕ್ರಮವನ್ನು ನಡೆಸಲು ಅನುಮತಿ ಕೇಳಿಕೊಂಡು ಬಂದಾಗ ಸಮಿತಿಯು ಅದರಿಂದಾಗುವ ವ್ಯತಿರಿಕ್ತ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಡೀ ಬಂಜಾರ ಸಮುದಾಯ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಪೇಚಿಗೆ ಸಿಕ್ಕಿಹಾಕಿಕೊಳ್ಳಬೇಕಾಗುತ್ತದೆ. ಈ ಹಿಂದೆ ಯಾವುದೇ ಪಕ್ಷದ ಆಡಳಿತವಿದ್ದರೂ ಅನೇಕ ಅಧ್ಯಕ್ಷರುಗಳು ಪಕ್ಷಾತೀತವಾಗಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿ ಮಾಡಿದ್ದಾರೆ. ಇಂದು ಸೂರಗೊಂಡನಕೊಪ್ಪದ ಭಾಯಾಘಡ್ ಈ ಹಂತಕ್ಕೆ ಬರಬೇಕಾದರೆ ಅನೇಕ ಅಧಿಕಾರಿಗಳ, ರಾಜಕಾರಣಿಗಳ, ಸನುದಾಯದ ಹಿರಿಯರ, ಸ್ಥಳೀಯರ ಪರಿಶ್ರಮವಿದೆ ಎನ್ನುವ ಅರಿವು ಎಲ್ಲರಲ್ಲೂ ಇರಲಿ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

9 COMMENTS

  1. ಬ್ರಾಹ್ಮಣರಲ್ಲದ, ಬೇರೆಲ್ಲಾ ಸಾದುಸಂತರ, ಸ್ವಾಮೀಜಿಗಳ, ಮಟಾದೀಶರ ಹೆಸರು ಮತ್ತು ಕೊಡುಗೆಯನ್ನು ನಿರ್ನಾಮ ಮಾಡಿ, ಮುಂದಿನ ಪೀಳಿಗೆಗೆ ಅವರ ಹೆಸರೂ ಸಹ ದಕ್ಕಬಾರದು, ಎಂಬುದು ಮನುವಾದಿಗಳ ಹಿಡನ್ ಅಜೆಂಡಾ. ಇದನ್ನು ಅವರು ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ.

  2. ಸರಿಯಾಗಿ ಹೇಳಿದರಿ ಬ್ರೋ …
    ಬಂಜಾರಾ ಸಮಾಜವನ್ನು SC ST ಯಿಂದ ತೆಗದಾಕಬೇಕು ಎಂಬ ಒಳಸಂಚು ಈ ಮನೊವಾದಿಗಳದೆ ಅಲ್ಲವೇ? ..

  3. ಸಂತ ಸೇವಾಲಾಲ್ ಅವರು ಬಂಜಾರ ಸಮುದಾಯದ ಆದರ್ಶ ಪುರುಷರಾಗಿದ್ದಾರೆ. ಅವರ ಚಿಂತನೆಗಳು ಸಮುದಾಯದ ಅಭಿವೃದ್ಧಿಗೆ ಕಾರಣವಾಗಿದೆ ಆದರೆ ಆರ್ ಎಸ್ ಎಸ್ ವಿಚಾರಧಾರೆಗಳು ಸಮಾಜದಲ್ಲಿ ಕೋಮುಗಲಭೆಯನ್ನು ಸೃಷ್ಟಿ ಮಾಡಿ ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿದ್ದಾರೆ ಇಂತಹ ಸಂಘಟನೆಗಳಿಂದ ಕಿಂಚಿತ್ತು ಪ್ರಯೋಜನವಾಗುವುದಿಲ್ಲ.

  4. RSS ಬಗ್ಗೆ ಬಂಜಾರ ಸಮುದಾಯಕ್ಕೆ ಪ್ರತ್ಯೇಕವಾಗಿ ಯುವಕರಿಗೆ ಸರಿಯಾದ ಮಾಹಿತಿ ನೀಡಬೇಕಾಗಿದೆ, RSS ಅದು ಒಂದು ಮನುವಾದಿ ಸಿದ್ಧಾಂತದ ಆಧಾರದಲ್ಲಿ ಸ್ಥಾಪಿಸಿಕೊಂಡ ಸಂಘಟನೆ ಅದು ಕಳೆದ 75 ವರ್ಷದಲ್ಲಿ ಈ ದೇಶದಲ್ಲಿ ಸಹೋದರತೆಯಿಂದ ಜೀವಿಸಲು ಯಾರನ್ನೂ ಬಿಡಲಿಲ್ಲ

  5. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರಿಯಬೇಡಿ

  6. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರೆಯಬೇಡಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....