Homeಮುಖಪುಟ'ಗಾಂಧಿ ಕೊಲೆಗೆ RSS ಕಾರಣ' ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ...

‘ಗಾಂಧಿ ಕೊಲೆಗೆ RSS ಕಾರಣ’ ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ ಕೋರ್ಟ್ ಸೂಚನೆ

- Advertisement -
- Advertisement -

“ಗಾಂಧಿ ಕೊಲೆಗೆ ಆರ್‌ಎಸ್‌ಎಸ್‌ ಕಾರಣ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಆರ್‌ಎಸ್‌ಎಸ್‌ ಮುಖಂಡನಿಗೆ ಕೋರ್ಟ್ ದಂಡ ವಿಧಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರ್‌ಎಸ್‌ಸ್‌ ಮುಖಂಡ ರಾಜೇಶ್‌ ಕುಂಟೆ ಮನವಿ ಸಲ್ಲಿಸಿದ್ದನ್ನು ಕೋರ್ಟ್ ಆಕ್ಷೇಪಿಸಿದೆ.

ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ₹1,000 ದಂಡ ವಿಧಿಸಿದ್ದು, ಈ ಮೊತ್ತವನ್ನು ರಾಹುಲ್‌ಗಾಂಧಿಯವರಿಗೆ ಪಾವತಿಸಬೇಕೆಂದು ಸೂಚಿಸಿರುವುದಾಗಿ ಕಾನೂನು ವಿಚಾರಗಳ ವೆಬ್‌ಸೈಟ್‌ ‘ಬಾರ್‌ ಅಂಡ್‌ ಬೆಂಚ್‌’ ವರದಿ ಮಾಡಿದೆ.

“ಮ್ಯಾಜಿಸ್ಟ್ರೇಟ್‌ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿರುವುದರಿಂದ ಪ್ರಕರಣ ಮುಂದೂಡುವಂತೆ ಕುಂಟೆ ಕೋರಿದ್ದಕ್ಕೆ ಮ್ಯಾಜಿಸ್ಟ್ರೇಟ್‌ ಅವರು ಕುಂಟೆಗೆ ದಂಡ ಹಾಕಿದ್ದಾರೆ” ಎಂದು ವರದಿ ತಿಳಿಸಿದೆ.

ಮಾನಹಾನಿ ಪ್ರಕರಣಗಳಲ್ಲಿ ದೂರುದಾರರು ಮೊದಲಿಗೆ ಸಾಕ್ಷಿಯಾಗಿ ವಿವರಣೆ ನೀಡುತ್ತಾರೆ. ಆದರೆ, ಸಾಕ್ಷಿಯಾಗಿ ಪರಿಶೀಲಿಸಲು ನೋಟರಿ ವಕೀಲರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರಿದ್ದ ಕುಂಟೆ ಮನವಿಯನ್ನು ಮ್ಯಾಜಿಸ್ಟ್ರೇಟ್‌ ತಿರಸ್ಕರಿಸಿದ್ದರು. ಇದನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಮ್ಯಾಜಿಸ್ಟ್ರೇಟ್‌ ನಿರ್ದೇಶನದಂತೆ ಸಿಆರ್‌ಪಿಸಿ ಸೆಕ್ಷನ್‌ 202ರ ಅಡಿ ಮಾನಹಾನಿ ದೂರಿನ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗೂ ಸಮನ್ಸ್‌ ಜಾರಿ ಮಾಡಬೇಕು ಎಂದು ಕುಂಟೆ ಮನವಿ ಮಾಡಿರುವುದನ್ನು ರಾಹುಲ್‌ ಗಾಂಧಿಯವರ ವಕೀಲ ಎನ್‌.ವಿ.ಐಯ್ಯರ್‌ ವಿರೋಧಿಸಿದ್ದಾರೆ.

ಮತ್ತೊಂದು ಸಾಕ್ಷಿಯನ್ನು ಆಲಿಸುವುದಕ್ಕೂ ಮುನ್ನ ತಮ್ಮ ವಾದವನ್ನು ಸಾಬೀತುಪಡಿಸಬೇಕು ಎಂದು ಹೇಳಿರುವ ಮ್ಯಾಜಿಸ್ಟ್ರೇಟ್‌ ಡಾ. ಜೆ ವಿ ಪಾಲಿವಾಲ್‌ ಅವರು ಕುಂಟೆ ಸಮನ್ಸ್‌ ಜಾರಿ ಮಾಡಲು ಕೋರಿರುವ ಎರಡನೇ ಮನವಿಗೆ ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ತಪ್ಪದೇ ಸಾಕ್ಷಿ ನುಡಿಯುವಂತೆ ಕುಂಟೆಗೆ ಕೋರ್ಟ್ ಸೂಚನೆ ನೀಡಿದೆ ಎಂದು ‘ಬಾರ್‌ ಅಂಡ್‌ ಬೆಂಚ್‌’ ವರದಿ ತಿಳಿಸಿದೆ.

ಏನಿದು ಪ್ರಕರಣ?

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್‌ಎಸ್‌ಎಸ್‌ ಕಾರಣ ಎಂದು ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು. ಇದನ್ನು ವಿರೋಧಿಸಿ ಆರ್‌ಎಸ್‌ಎಸ್‌ ನಾಯಕ ಕುಂಟೆ ಅವರು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2014ರಿಂದಲೂ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಪ್ರಕರಣವಿದೆ.

ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...