Homeಮುಖಪುಟ'ಗಾಂಧಿ ಕೊಲೆಗೆ RSS ಕಾರಣ' ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ...

‘ಗಾಂಧಿ ಕೊಲೆಗೆ RSS ಕಾರಣ’ ಮಾನಹಾನಿ ಪ್ರಕರಣ: ರಾಹುಲ್‌ಗೆ 1,000 ರೂ. ನೀಡುವಂತೆ RSS ಮುಖಂಡನಿಗೆ ಕೋರ್ಟ್ ಸೂಚನೆ

- Advertisement -
- Advertisement -

“ಗಾಂಧಿ ಕೊಲೆಗೆ ಆರ್‌ಎಸ್‌ಎಸ್‌ ಕಾರಣ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿಕೆ ನೀಡಿದ್ದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಆರ್‌ಎಸ್‌ಎಸ್‌ ಮುಖಂಡನಿಗೆ ಕೋರ್ಟ್ ದಂಡ ವಿಧಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರ್‌ಎಸ್‌ಸ್‌ ಮುಖಂಡ ರಾಜೇಶ್‌ ಕುಂಟೆ ಮನವಿ ಸಲ್ಲಿಸಿದ್ದನ್ನು ಕೋರ್ಟ್ ಆಕ್ಷೇಪಿಸಿದೆ.

ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯವು ₹1,000 ದಂಡ ವಿಧಿಸಿದ್ದು, ಈ ಮೊತ್ತವನ್ನು ರಾಹುಲ್‌ಗಾಂಧಿಯವರಿಗೆ ಪಾವತಿಸಬೇಕೆಂದು ಸೂಚಿಸಿರುವುದಾಗಿ ಕಾನೂನು ವಿಚಾರಗಳ ವೆಬ್‌ಸೈಟ್‌ ‘ಬಾರ್‌ ಅಂಡ್‌ ಬೆಂಚ್‌’ ವರದಿ ಮಾಡಿದೆ.

“ಮ್ಯಾಜಿಸ್ಟ್ರೇಟ್‌ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿರುವುದರಿಂದ ಪ್ರಕರಣ ಮುಂದೂಡುವಂತೆ ಕುಂಟೆ ಕೋರಿದ್ದಕ್ಕೆ ಮ್ಯಾಜಿಸ್ಟ್ರೇಟ್‌ ಅವರು ಕುಂಟೆಗೆ ದಂಡ ಹಾಕಿದ್ದಾರೆ” ಎಂದು ವರದಿ ತಿಳಿಸಿದೆ.

ಮಾನಹಾನಿ ಪ್ರಕರಣಗಳಲ್ಲಿ ದೂರುದಾರರು ಮೊದಲಿಗೆ ಸಾಕ್ಷಿಯಾಗಿ ವಿವರಣೆ ನೀಡುತ್ತಾರೆ. ಆದರೆ, ಸಾಕ್ಷಿಯಾಗಿ ಪರಿಶೀಲಿಸಲು ನೋಟರಿ ವಕೀಲರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರಿದ್ದ ಕುಂಟೆ ಮನವಿಯನ್ನು ಮ್ಯಾಜಿಸ್ಟ್ರೇಟ್‌ ತಿರಸ್ಕರಿಸಿದ್ದರು. ಇದನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಮ್ಯಾಜಿಸ್ಟ್ರೇಟ್‌ ನಿರ್ದೇಶನದಂತೆ ಸಿಆರ್‌ಪಿಸಿ ಸೆಕ್ಷನ್‌ 202ರ ಅಡಿ ಮಾನಹಾನಿ ದೂರಿನ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗೂ ಸಮನ್ಸ್‌ ಜಾರಿ ಮಾಡಬೇಕು ಎಂದು ಕುಂಟೆ ಮನವಿ ಮಾಡಿರುವುದನ್ನು ರಾಹುಲ್‌ ಗಾಂಧಿಯವರ ವಕೀಲ ಎನ್‌.ವಿ.ಐಯ್ಯರ್‌ ವಿರೋಧಿಸಿದ್ದಾರೆ.

ಮತ್ತೊಂದು ಸಾಕ್ಷಿಯನ್ನು ಆಲಿಸುವುದಕ್ಕೂ ಮುನ್ನ ತಮ್ಮ ವಾದವನ್ನು ಸಾಬೀತುಪಡಿಸಬೇಕು ಎಂದು ಹೇಳಿರುವ ಮ್ಯಾಜಿಸ್ಟ್ರೇಟ್‌ ಡಾ. ಜೆ ವಿ ಪಾಲಿವಾಲ್‌ ಅವರು ಕುಂಟೆ ಸಮನ್ಸ್‌ ಜಾರಿ ಮಾಡಲು ಕೋರಿರುವ ಎರಡನೇ ಮನವಿಗೆ ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ತಪ್ಪದೇ ಸಾಕ್ಷಿ ನುಡಿಯುವಂತೆ ಕುಂಟೆಗೆ ಕೋರ್ಟ್ ಸೂಚನೆ ನೀಡಿದೆ ಎಂದು ‘ಬಾರ್‌ ಅಂಡ್‌ ಬೆಂಚ್‌’ ವರದಿ ತಿಳಿಸಿದೆ.

ಏನಿದು ಪ್ರಕರಣ?

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್‌ಎಸ್‌ಎಸ್‌ ಕಾರಣ ಎಂದು ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು. ಇದನ್ನು ವಿರೋಧಿಸಿ ಆರ್‌ಎಸ್‌ಎಸ್‌ ನಾಯಕ ಕುಂಟೆ ಅವರು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2014ರಿಂದಲೂ ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಪ್ರಕರಣವಿದೆ.

ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...