Homeರಾಷ್ಟ್ರೀಯಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌

ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌

- Advertisement -
- Advertisement -

ದೇಶದ ಮುಸ್ಲಿಮರಿಗೆ ದಿನನಿತ್ಯ ಬೆದರಿಕೆ ಹಾಗೂ ಧಾರ್ಮಿಕ ಆಧಾರದಲ್ಲಿ ತಾರತಮ್ಯವಾಗುತ್ತಿರುವ ಮಧ್ಯೆಯೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಭಾರತವು ತನ್ನ ‘ಪ್ರಗತಿ’ಯ ಪಯಣವನ್ನು ಪ್ರಾರಂಭಿಸಿದ್ದು, ಅದನ್ನು ನಿಲ್ಲಿಸಲು ಈಗ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಭಾಗವತ್ ಅವರ ಈ ಹೇಳಿಕೆ ಭಾರಿ ಗೊಂದಲವನ್ನು ಸೃಷ್ಟಿಸಿದ್ದು, ‘ಪ್ರಗತಿ’ ಎಂಬ ಪದವನ್ನು ಅವರು ನಿಜವಾಗಿಯೂ ಯಾವ ಅರ್ಥದಲ್ಲಿ ನೀಡಿದ್ದಾರೆ ಎಂಬ ಪ್ರಶ್ನೆ ಉಧ್ಬವಿಸಿದೆ.

ಹರಿದ್ವಾರದಲ್ಲಿ ಸಂತರ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು ಈ ಹೇಳಿಕೆಯನ್ನುಅವರು ನೀಡಿದ್ದಾರೆ. ಸ್ವಾಮಿ ವಿವೇಕಾನಂದ ಮತ್ತು ಮಹರ್ಷಿ ಅರಬಿಂದೋ ಅವರ ಕನಸು 10 ಅಥವಾ 15 ವರ್ಷಗಳಲ್ಲಿ ನನಸಾಗಬಹುದು ಮತ್ತು ಇದಕ್ಕಾಗಿ ಜನರನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿದ ಭಾಗವತ್, ಸನಾತನ ಧರ್ಮವೆಂದರೆ ಹಿಂದೂ ರಾಷ್ಟ್ರವಲ್ಲದೆ ಬೇರೇನೂ ಅಲ್ಲ, ದೇಶದ ಪ್ರಗತಿಯು ಧರ್ಮದ ಪ್ರಗತಿಯೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು 

ಧರ್ಮದ ಉದ್ದೇಶವೇ ಭಾರತದ ಉದ್ದೇಶಗಳಾಗಿವೆ ಎಂದು ಪ್ರತಿಪಾದಿಸಿದ ಭಾಗವತ್‌, ಜನರನ್ನು ಸಬಲೀಕರಣಗೊಳಿಸುವ ಮೂಲಕ ಮಾತ್ರ ಉದ್ದೇಶವನ್ನು ಸಾಧಿಸಬಹುದು. ಇದಕ್ಕೆ ಜನರು ಸಿದ್ಧರಾದಾಗ, ಇತರರ ನಡವಳಿಕೆಯೂ ಅದಕ್ಕೆ ಅನುಗುಣವಾಗಿ ಬದಲಾಗುತ್ತದೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ನಂತೆ ಉದ್ದೇಶವನ್ನು ಸಾಧಿಸಲು ಜನರನ್ನು ಸಿದ್ಧಪಡಿಸುವಂತೆ ಸಂತರನ್ನು ಒತ್ತಾಯಿಸಿದ ಭಾಗವತ್, ಕೈಯಲ್ಲಿ ಕೋಲು ಇಟ್ಟುಕೊಂಡು ಅಹಿಂಸೆಯ ಬಗ್ಗೆ ಮಾತನಾಡಬೇಕು. ಏಕೆಂದರೆ ಜಗತ್ತು ಶಕ್ತಿಯನ್ನು ಮಾತ್ರ ಅರ್ಥಮಾಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

“ನಮಗೆ ಯಾರೊಂದಿಗೂ ಯಾವುದೇ ದ್ವೇಷವಿಲ್ಲ” ಎಂದು ಹೇಳಿದ ಅವರು, ತನ್ನ ಉದ್ದೇಶದ ಹಾದಿಯಲ್ಲಿರುವ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲಾಗುತ್ತದೆ ಅಥವಾ ಮುಗಿಸಲಾಗುತ್ತದೆ, ಆದರೆ ಭಾರತವು ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

“ನಾವು ನಮ್ಮ ವೈವಿಧ್ಯತೆ ಮತ್ತು ಸಂಪ್ರದಾಯಗಳನ್ನು ಸುರಕ್ಷಿತವಾಗಿರಿಸಿದ್ದೇವೆ. ಆದರೆ ವೈವಿಧ್ಯತೆಯಿಂದಾಗಿ ನಾವು ಪರಸ್ಪರ ಭಿನ್ನವಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ನಾವು ನಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಸಾಗಿದರೆ, ನಾವು ನಮ್ಮ ಗುರಿಯನ್ನು ತಲುಪುತ್ತೇವೆ” ಎಂದು ಭಾಗವತ್‌ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. He is just an uneducated person and creating nuisance in public He is against women freedom too unfortunately he is roaming freely instead of being behind bars.. education and free health facility are the priorities..such an

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...