HomeಮುಖಪುಟRSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮಹಾತ್ಮ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಪರಿಗಣಿಸಿ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಆರ್‌ಎಸ್‌ಎಸ್ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ಕುಂಟೆ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 2014 ರ ಭಾಷಣದ ಲೇಖನಪ್ರತಿಯನ್ನು ಈ ಪ್ರಕರಣದಲ್ಲಿ  ಸಾಕ್ಷಿಯಾಗಿ ತೆಗೆದುಕೊಳ್ಳಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೆಪ್ಟೆಂಬರ್ 2018ರಲ್ಲಿ ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ರಾಜೇಶ್ ಕುಂಟೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿ ರೇವತಿ ಮೊಹಿತೆ ಡೆರೆ ಅವರಿದ್ದ ಏಕಸದಸ್ಯ ಪೀಠವು ಮನವಿಯನ್ನು ತಿರಸ್ಕರಿಸಿ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಅರ್ಜಿದಾರರ ಪರ ವಕೀಲ ನಿತೀನ್ ಪ್ರಧಾನ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ 2018 ರ ಆದೇಶವನ್ನು ಪ್ರಶ್ನಿಸಿದ್ದರು. ಜೂನ್ 2018 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ಸೆಪ್ಟೆಂಬರ್ 2018 ರಲ್ಲಿ ಭಿವಾಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ರಾಹುಲ್ ಗಾಂಧಿ ಅವರ ಮಾರ್ಚ್ 6, 2014ರ ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಒಪ್ಪಿಕೊಳ್ಳಲು ನಿರಾಕರಿಸಿತ್ತು.

ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 2014 ರ ಮಾರ್ಚ್ 6 ರಂದು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಂದಿನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾತ್ಮ ಗಾಂಧಿ ಹತ್ಯೆಯ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು.

“ಕಾಂಗ್ರೆಸ್ ನಾಯಕ ತಮ್ಮ ಭಾಷಣದ ಮೂಲಕ ಸಂಘದ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ” ಎಂದು ಆರೋಪಿಸಿ, ರಾಜೇಶ್ ಕುಂಟೆ ಭಿವಾಂಡಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಮಾರ್ಚ್ 2015 ರಲ್ಲಿ, ಬಾಂಬೆ ಹೈಕೋರ್ಟ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ರಾಹುಲ್ ಗಾಂಧಿಯವರ ಮನವಿಯನ್ನು ವಜಾಗೊಳಿಸಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲು ವಿಶೇಷ ರಜೆ ಅರ್ಜಿಯನ್ನು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲು ತಿಳಿಸಿದ್ದರು.

ಆದರೆ, ಸುಪ್ರೀಂಕೋರ್ಟ್‌ನಲ್ಲಿ ಮನವಿ ಹಿಂತೆಗೆದುಕೊಂಡಿದ್ದ ರಾಹುಲ್ ಗಾಂಧಿ, ವಿಚಾರಣೆಯನ್ನು ಎದುರಿಸಲು ಸಿದ್ಧ ಎಂದು ತಿಳಿಸಿದ್ದರು. ಜೊತೆಗೆ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿಯಲ್ಲಿ, ಕೊರೊನಾ ನಿರ್ಬಂಧಗಳಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ಕಾರಣ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಬೇಕು ಎಂದು ರಾಹುಲ್ ಗಾಂಧಿಯ ವಕೀಲರು ಮನವಿ ಸಲ್ಲಿಸಿದ್ದರು. ವಿನಾಯಿತಿ ನೀಡಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗೆ ಇಲಕ್ಷನ ಭಾಷಣದಲ್ಲಿ ಮೋದಿಯವೀರುದ್ದ Cheating case book ಮಾಡಬೆಕಿತ್ತಲವಾ ?

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...