ಬೆಂಗಳೂರು: ‘ಇತಿಹಾಸವು ಆರ್ಎಸ್ಎಸ್ ದೇಶಕ್ಕೆ ಬಗೆದ ದ್ರೋಹದ ಉದಾಹರಣೆಗಳಿಂದ ತುಂಬಿಕೊಂಡಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದ್ದರೂ ಆರ್ಎಸ್ಎಸ್ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ನವೆಂಬರ್ 10, ಸೋಮವಾರ ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ‘1948ರ ಫೆಬ್ರುವರಿ 24ರಂದು ಆರ್ಎಸ್ಎಸ್ ರಾಷ್ಟ್ರಧ್ವಜಕ್ಕೆ ಹೇಗೆ ಅವಮಾನಿಸಿತ್ತು ಎಂಬುದನ್ನು ತೋರಿಸುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ನ ಕಾರ್ಯದರ್ಶಿಗೆ ಬರೆದ ಪತ್ರ ಇಲ್ಲಿದೆ’ ಎಂದು ದಾಖಲೆ ಹಂಚಿಕೊಂಡಿದ್ದಾರೆ.
ಇದರೊಂದಿಗೆ ‘ಆರ್ಎಸ್ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷ, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷ, ದೇಶ ವಿರೋಧಿತ್ವಕ್ಕೆ 100 ವರ್ಷಗಳು’ ಎಂದು ಅವರು ಟೀಕಿಸಿದ್ದಾರೆ.
ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್ಎಸ್ಎಸ್ ಇತಿಹಾಸವನ್ನು ತಿಳಿದುಕೊಳ್ಳುವ ಸಮಯ ಇದು ಎಂದು ಹೇಳಿದ್ದಾರೆ.



He doesn’t have work for Development activities because of State Govt Bankrupt so he is doing all these non usable allegations to divert public attention and NEws channels towards non require matter