Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...