Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...