Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...