Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...