Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...