Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...