Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...