Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...