Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...