Homeಮುಖಪುಟ'ಆರ್‌ಎಸ್‌ಎಸ್ ಬ್ಯಾನ್‌ ಮಾಡಿ' - ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

- Advertisement -
- Advertisement -

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು RSS ಅನ್ನು ಬ್ಯಾನ್‌ ಮಾಡಿ ಎಂದು ಆಗ್ರಹಿಸಿದ್ದಾರೆ.

ಆರ್.ಎಸ್.ಎಸ್ ನೀಡಿರುವ ವ್ಯಾಖ್ಯಾನ ಭಾರತದಲ್ಲಿ ಬದುಕುತ್ತಿರುವ ಬೇರೆ ಧರ್ಮೀಯರಿಗೆ ಮಾಡಿದ ಅಪಮಾನ. ಆರ್.ಎಸ್.ಎಸ್ ನೀಡುವ ತಲೆಬುಡವಿಲ್ಲದ, ಅರ್ಥರಹಿತ ಹೇಳಿಕೆಗಳು ಮುಂದೊಂದು ದಿನ ಸಮಗ್ರ ಭಾರತವನ್ನು ಒಡೆದು ಹಾಕಲಿದೆ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್‌ನ ಹಿಂದೂ ರಾಷ್ಟ್ರ ಸಿದ್ಧಾಂತ, ನೀತಿ ಮತ್ತು ಕಾರ್ಯಗಳು ದೇಶದ ಹಿತಾಸಕ್ತಿಗೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಆರ್ ಎಸ್ ಎಸ್ ನ್ನು ನಿಷೇಧ ಮಾಡಬೇಕು ಎಂದು ಎಂದು ಗಿಯಾನಿ ಹರ್ ಪ್ರೀತ್ ಸಿಂಗ್ ಒತ್ತಾಯಿಸಿದ್ದಾರೆ.

ಪಂಜಾಬ್ ನ ಅಮೃತಸರದಲ್ಲಿ ಮಾಧ್ಯದೊಂದಿಗೆ ಮಾತನಾಡಿದ ಗಿಯಾನಿ ಹರ್ ಪ್ರೀತ್ ಸಿಂಗ್, ಆರ್.ಎಸ್.ಎಸ್ ನೀಡಿರುವ ‘ಹಿಂದೂ ರಾಷ್ಟ್ರ’ ಹೇಳಿಕೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ವಿಜಯದಶಮಿಯ ದಿನ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಹಿಂದೂ ರಾಷ್ಟ್ರ’ ಎಂದು ಕರೆ ಕೊಟ್ಟಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಆರ್.ಎಸ್.ಎಸ್ ಎಲ್ಲಾ ಧರ್ಮದವರನ್ನೂ ಹಿಂದೂಗಳೆಂದು ಬಿಂಬಿಸಲು ಹೊರಟಿದೆ. ದೇಶದಲ್ಲಿ ಬೇರೆ ಬೇರೆ ಧರ್ಮೀಯರು ಇದ್ದಾರೆ. ಅವರೆಲ್ಲಾ ಹಿಂದೂಗಳಾಗಲು ಹೇಗೆ ಸಾಧ್ಯ..? ಸಿಖ್ಖರು, ಜೈನರು, ಬೌದ್ಧರು ಸೇರಿದಂತೆ ಹಲವು ಧರ್ಮದವರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಆರ್.ಎಸ್.ಎಸ್ ಇದನ್ನೆಲ್ಲಾ ಅರ್ಥ ಮಾಡಿಕೊಂಡಿಲ್ಲ. ದೇಶದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಗಿಯಾನಿ ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡಿದರು. ಅದರಲ್ಲಿ ಇನ್ನು ಮುಂದೆ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಲು ಇರುವ ಅಡ್ಡಿಯೂ ಹೋಗುತ್ತದೆ ಎಂದು ಹೇಳಿದ್ದರು. ಇಂತಹ ಹೇಳಿಕೆಗಳು ಮಹಿಳೆಯರ ಗೌರವ, ಸ್ಥಾನಮಾನಕ್ಕೆ ಧಕ್ಕೆ ತರುವಂತವು. ಕಾಶ್ಮೀರಿ ಮಹಿಳೆಯರೂ ಕೂಡ ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರ ಗೌರವ ಕಾಪಾಡುವುದು ನಮ್ಮ ಕರ್ತವ್ಯ. ಎಲ್ಲಾ ಕಾಶ್ಮೀರಿ ಮಹಿಳೆಯರ ಗೌರವ ಕಾಪಾಡಲು ಸಿಖ್ಖರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮೋಹನ್ ಭಾಗವತ್ ರ ಹೇಳಿಕೆ ನೀಡಿದ ದಿನವೇ ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಆ ದಿನವೇ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ (ಎಸ್.ಜಿ.ಪಿ.ಸಿ) ಗೋಬಿಂದ್ ಸಿಂಗ್ ಲಾಂಗೋವಲ್ ಖಂಡಿಸಿದ್ದರು. ಭಾರತ ಹಿಂದೂ ರಾಷ್ಟ್ರ ಎಂದು ನೀಡಿರುವ ಹೇಳಿಕೆ ಖಂಡನಾರ್ಹ. ಸಂವಿಧಾನದಲ್ಲಿ ಎಲ್ಲಾ ಧರ್ಮದವರಿಗೂ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಸ್.ಜಿ.ಪಿ.ಸಿ ಯನ್ನು ಸಿಖ್ ಧರ್ಮದ ಸಂಸತ್ತು ಎಂದೇ ಕರೆಯಲಾಗುತ್ತದೆ. ಅಲ್ಲದೇ ಸಮುದಾಯದ ಎಲ್ಲಾ ಗುರುದ್ವಾರಗಳು ಎಸ್.ಜಿ.ಪಿ.ಸಿ ಅಡಿಯಲ್ಲೇ ಧಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತವೆ. ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ಮಾಡಲಾಗುತ್ತದೆ. ಸಿಖ್ ಧರ್ಮದ ಮತದಾರರು ತಮ್ಮ ಪದಾಧಿಕಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಇನ್ನು 2004ರಲ್ಲಿ ಅಕಾಲ್ ತಖ್ತ್ ಸಿಖ್ಖರು, ಆರ್.ಎಸ್.ಎಸ್ ಅಂಗಸಂಸ್ಥೆಯಾದ ರಾಷ್ಟ್ರೀಯ ಸಿಖ್ ಸಂಗತ್ ನಿಂದ ದೂರವಿರಬೇಕು ಎಂದು ಕೇಳಿಕೊಳ್ಳಲಾಗಿತ್ತು. ರಾಷ್ಟ್ರೀಯ ಸಿಖ್ ಸಂಗತ್, ಸಿಖ್ ಧರ್ಮದ ವಿಚಾರಧಾರೆಗಳ ವಿರುದ್ಧವಾಗಿದೆ. 2017ರಲ್ಲಿ ಅಕಾಲ್ ತಖ್ತ್ ನ ಮುಖ್ಯಸ್ಥ ಗುರು ಗೋಬಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಿಖ್ ಸಂಗತ್ ಆಯೋಜಿಸಿತ್ತು. ಆದರೆ ಇದು ಸಿಖ್ಖರ ವಿರುದ್ಧವಾಗಿದೆ ಎಂದು ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಗುರುಬಚ್ಚನ್ ಸಿಂಗ್ ಟೀಕಿಸಿದ್ದರು.

ಸಿಖ್ಖರಿಗೆ ಪ್ರತ್ಯೇಕ ಇತಿಹಾಸ, ಆಚಾರ-ವಿಚಾರ, ಪದ್ಧತಿ, ಸಂಪ್ರದಾಯವಿದೆ. ಧರ್ಮದ ಆಚರಣೆಗಳು, ನಂಬಿಕೆಗಳು, ನೀತಿ ಸಂಹಿತೆಗಳೂ ಬೇರೆಯಾಗಿವೆ. ನಮ್ಮ ನಂಬಿಕೆ, ಮತ್ತು ರೀತಿ-ರಿವಾಜುಗಳಲ್ಲಿ ಇತರರು ಹಸ್ತಕ್ಷೇಪ ಮಾಡುವುದನ್ನು ಹೇಗೆ ತಾನೇ ಸಹಿಸಿಕೊಳ್ಳಲು ಸಾಧ್ಯ..? ಎಂದು ಗಿಯಾನಿ ಗುರುಬಚ್ಚನ್ ಸಿಂಗ್ ಪ್ರಶ್ನಿಸುತ್ತಾರೆ.

ಇತ್ತ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳದ ಮಧ್ಯೆ ಅಕಾಲ್ ತಖ್ತ್ ಸಿಕ್ಕಿಹಾಕಿಕೊಂಡಿದೆ. ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್, ಅಕ್ಟೋಬರ್ 12ರಂದು ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಜಂಟಿಯಾಗಿ ಆಚರಿಸೋಣವೆಂದು ಕೇಳಿದ್ದ ಕಾಂಗ್ರೆಸ್ ನ್ನು ದೂಷಿಸಿದರು. ಕಾಂಗ್ರೆಸ್ ದುರಹಂಕಾರದ ದುರ್ವರ್ತನೆ ತೋರುತ್ತಿದೆ. ಅಕಾಲ್ ತಖ್ತ್ ಗಿಂತ ಮೇಲ್ಮಟ್ಟದಲ್ಲಿದೆ ಎಂಬ ಭಾವನೆಯಿಂದ ಮೆರೆಯುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶಿರೋಮಣಿ ಅಕಾಲಿ ದಳ, ಉದ್ದೇಶಪೂರ್ವಕವಾಗಿ ಅವಮಾನ ಮಾಡುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಒಟ್ಟಿನಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಂವಿಧಾನ ಮತ್ತು ದೇಶದ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...