Homeಕರ್ನಾಟಕಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

- Advertisement -
- Advertisement -

ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್‌ಎಸ್‌ಎಸ್ ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಉದ್ದೇಶಿಸಿ ಪೋಸ್ಟ್ ಹಾಕಿರುವ ಹರಿಪ್ರಸಾದ್,”ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ”ಎಂದಿದ್ದಾರೆ.

ಆರ್‌ಎಸ್‌ಎಸ್ ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕಾ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹೀರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ ಎಂದು ಸವಾಲ್ ಹಾಕಿದ್ದಾರೆ.


ಮೂಲಭೂತವಾಗಿ ಆರ್‌ಎಸ್‌ಎಸ್ ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಮಾಜ ಸೇವೆಯ ಮುಖ ಹೊತ್ತಿರುವ ಆರ್‌ಎಸ್‌ಎಸ್‌‌ ನೊಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಿಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ ಎಂದಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್‌ಎಸ್‌ಎಸ್ ನಮ್ಮ ಸೈದ್ದಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್‌ಎಸ್‌ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನ ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ ಎಂದು ವಿಜಯೇಂದ್ರ ಅವರಿಗೆ ಕುಟುಕಿದ್ದಾರೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...