Homeಕರ್ನಾಟಕಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

- Advertisement -
- Advertisement -

ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್‌ಎಸ್‌ಎಸ್ ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಉದ್ದೇಶಿಸಿ ಪೋಸ್ಟ್ ಹಾಕಿರುವ ಹರಿಪ್ರಸಾದ್,”ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ”ಎಂದಿದ್ದಾರೆ.

ಆರ್‌ಎಸ್‌ಎಸ್ ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕಾ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹೀರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ ಎಂದು ಸವಾಲ್ ಹಾಕಿದ್ದಾರೆ.


ಮೂಲಭೂತವಾಗಿ ಆರ್‌ಎಸ್‌ಎಸ್ ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಮಾಜ ಸೇವೆಯ ಮುಖ ಹೊತ್ತಿರುವ ಆರ್‌ಎಸ್‌ಎಸ್‌‌ ನೊಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಿಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ ಎಂದಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್‌ಎಸ್‌ಎಸ್ ನಮ್ಮ ಸೈದ್ದಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್‌ಎಸ್‌ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನ ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ ಎಂದು ವಿಜಯೇಂದ್ರ ಅವರಿಗೆ ಕುಟುಕಿದ್ದಾರೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...