Homeಕರ್ನಾಟಕಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

- Advertisement -
- Advertisement -

ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್‌ಎಸ್‌ಎಸ್ ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಉದ್ದೇಶಿಸಿ ಪೋಸ್ಟ್ ಹಾಕಿರುವ ಹರಿಪ್ರಸಾದ್,”ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ”ಎಂದಿದ್ದಾರೆ.

ಆರ್‌ಎಸ್‌ಎಸ್ ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕಾ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹೀರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ ಎಂದು ಸವಾಲ್ ಹಾಕಿದ್ದಾರೆ.


ಮೂಲಭೂತವಾಗಿ ಆರ್‌ಎಸ್‌ಎಸ್ ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಮಾಜ ಸೇವೆಯ ಮುಖ ಹೊತ್ತಿರುವ ಆರ್‌ಎಸ್‌ಎಸ್‌‌ ನೊಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಿಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ ಎಂದಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್‌ಎಸ್‌ಎಸ್ ನಮ್ಮ ಸೈದ್ದಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್‌ಎಸ್‌ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನ ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ ಎಂದು ವಿಜಯೇಂದ್ರ ಅವರಿಗೆ ಕುಟುಕಿದ್ದಾರೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...