Homeಕರ್ನಾಟಕಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್ ತಾಲಿಬಾನ್‌ಗಿಂತಲೂ ಹೆಚ್ಚು ಅಪಾಯಕಾರಿ: ಬಿ.ಕೆ ಹರಿಪ್ರಸಾದ್

- Advertisement -
- Advertisement -

ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್‌ಎಸ್‌ಎಸ್ ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಉದ್ದೇಶಿಸಿ ಪೋಸ್ಟ್ ಹಾಕಿರುವ ಹರಿಪ್ರಸಾದ್,”ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ”ಎಂದಿದ್ದಾರೆ.

ಆರ್‌ಎಸ್‌ಎಸ್ ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕಾ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹೀರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ ಎಂದು ಸವಾಲ್ ಹಾಕಿದ್ದಾರೆ.


ಮೂಲಭೂತವಾಗಿ ಆರ್‌ಎಸ್‌ಎಸ್ ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಮಾಜ ಸೇವೆಯ ಮುಖ ಹೊತ್ತಿರುವ ಆರ್‌ಎಸ್‌ಎಸ್‌‌ ನೊಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಿಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ ಎಂದಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್‌ಎಸ್‌ಎಸ್ ನಮ್ಮ ಸೈದ್ದಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್‌ಎಸ್‌ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನ ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ ಎಂದು ವಿಜಯೇಂದ್ರ ಅವರಿಗೆ ಕುಟುಕಿದ್ದಾರೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...