Homeಕರ್ನಾಟಕRSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

- Advertisement -
- Advertisement -

ಆರ್‌ಎಸ್‌ಎಸ್‌ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಲು ಸಂಘದ ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, “ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

“ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು. ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ..? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ..? ” ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

“ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ” ಎಂದು ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...