Homeಕರ್ನಾಟಕRSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

- Advertisement -
- Advertisement -

ಆರ್‌ಎಸ್‌ಎಸ್‌ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಲು ಸಂಘದ ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, “ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

“ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು. ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ..? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ..? ” ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

“ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ” ಎಂದು ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...