Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...