Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...