Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...