Homeಮುಖಪುಟಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಬಿ.ಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಕೆಲವು RSS ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು,ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಅವರು ತಿಳಿಸಿದ್ದಾರೆ.

ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...