Homeಮುಖಪುಟಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಬಿ.ಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಕೆಲವು RSS ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು,ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಅವರು ತಿಳಿಸಿದ್ದಾರೆ.

ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...