Homeಕರ್ನಾಟಕರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಗಳನ್ನು RSS ‌ನ ಜನರು ಗುರುತು ಮಾಡುತ್ತಿರುವ ಬಗ್ಗೆ ಬಹಳ ದಿನಗಳಿಂದ ಆರೋಪಗಳು ಕೇಳಿ ಬಂದಿತ್ತು. ಇದೀಗ ಜೆಡಿಎಸ್ ನಾಯಕ ಮಾಜಿ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆಗಳನ್ನು RSS ‌‌ನವರು ಗುರುತು ಮಾಡುತ್ತಿದ್ದಾರೆ” ಎಂಬ ಅಘಾತಕಾರಿ ಮಾಹಿತಿಯನ್ನು ಹೊಗೆಡವಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ RSS ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. RSS ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವಕಾಶ ಸಿಕ್ಕ ಕೂಡಲೇ ಮನುವಾದಿಗಳೊಂದಿಗೆ ಮದುಚಂದ್ರ ಆಚರಿಸುವುದು, ಅವಕಾಶ ಇಲ್ಲದಿದ್ದರೆ ಗೋಳಾಡುವುದು; ಕುಮಾರಸ್ವಾಮಿಯವರ ಈ ಎಡಬಿಡಂಗಿತನದಿಂದಾಗಿ, ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಬಹುದಾಗಿದ್ದ ಜೆ.ಡಿ.ಎಸ್. ಇಂದು ಅವನತಿಯ ಅಂಚಿಗೆ ಬಂದು ನಿಂತಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...