Homeಕರ್ನಾಟಕರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಗಳನ್ನು RSS ‌ನ ಜನರು ಗುರುತು ಮಾಡುತ್ತಿರುವ ಬಗ್ಗೆ ಬಹಳ ದಿನಗಳಿಂದ ಆರೋಪಗಳು ಕೇಳಿ ಬಂದಿತ್ತು. ಇದೀಗ ಜೆಡಿಎಸ್ ನಾಯಕ ಮಾಜಿ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆಗಳನ್ನು RSS ‌‌ನವರು ಗುರುತು ಮಾಡುತ್ತಿದ್ದಾರೆ” ಎಂಬ ಅಘಾತಕಾರಿ ಮಾಹಿತಿಯನ್ನು ಹೊಗೆಡವಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ RSS ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. RSS ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವಕಾಶ ಸಿಕ್ಕ ಕೂಡಲೇ ಮನುವಾದಿಗಳೊಂದಿಗೆ ಮದುಚಂದ್ರ ಆಚರಿಸುವುದು, ಅವಕಾಶ ಇಲ್ಲದಿದ್ದರೆ ಗೋಳಾಡುವುದು; ಕುಮಾರಸ್ವಾಮಿಯವರ ಈ ಎಡಬಿಡಂಗಿತನದಿಂದಾಗಿ, ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಬಹುದಾಗಿದ್ದ ಜೆ.ಡಿ.ಎಸ್. ಇಂದು ಅವನತಿಯ ಅಂಚಿಗೆ ಬಂದು ನಿಂತಿದೆ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...