Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಬಹಿರಂಗವಾಗಿ ನಡೆಯುತ್ತಿದ್ದು, ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ಗುರಿಯಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜುಲೈ 18, 2024ರಂದು ವಿಶ್ವ ವಿದ್ಯಾಲಯದ ಅತಿಥಿ ಗೃಹದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರವೊಂದು ನಡೆದಿದ್ದು, ಕುಲಸಚಿವ ಆರ್.ಆರ್ ಬಿರಾದಾರ, ಶೈಕ್ಷಣಿಕ ನಿರ್ದೇಶಕ ಪ್ರೊ. ಬಸವಾರಾಜ್ ಡೋಣುರ್, ವಿವಿ ಅಭಿವೃದ್ಧಿ ಅಧಿಕಾರಿ ಪ್ರೊ. ಚನ್ನವೀರಯ್ಯ, ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಕುಬೂಕಡ್ಡಿ , ಚಿಫ್ ವಾರ್ಡನ್ ಡಾ. ಬಸವಾರಾಜ್ ಸೋಮನಮರಡಿ, ವಿವಿ ಶಿಸ್ತು ಪಾಲನಾ ಅಧಿಕಾರಿ ವೆಂಕಟರಮಣ ದೊಡ್ಡಿ, ಪರೀಕ್ಷಾ ಮುಖ್ಯ ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಪಾಲ್ಗೊಂಡು ಭಗವಾಧ್ವಜಕ್ಕೆ ನಮಿಸಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿ ನಂದಕುಮಾರ ಪಿ ಆರೋಪಿಸಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅವರು, ಆರ್‌ಎಸ್‌ಎಸ್‌ನ 100ನೇ ವರ್ಷಾಚರಣೆ ನಿಮಿತ್ತ ದಕ್ಷಿಣ ಭಾರತದಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಿದ್ದಾರೆ. ಅದರ ಭಾಗವಾಗಿ ಕೇಂದ್ರೀಯ ವಿವಿಯಲ್ಲಿ ಸಿದ್ದತಾ ಕಾರ್ಯಕ್ರಮ ಆಯೋಜಿಸಿದ್ದರು ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ನಾಗಪುರದಿಂದ ಆಗಮಿಸಿದ್ದ ಕೆಲವರು ಹಿಂದಿಯಲ್ಲಿ ಭಾಷಣ ಮಾಡಿದ್ದು, “ವಿವಿ ಆರ್‌ಎಸ್‌ಎಸ್‌ ಕೇಂದ್ರ ಎನ್ನುವುದನ್ನು ಪದೇ ಪದೇ ಗುರುತಿಸುವ ಅಗತ್ಯವಿಲ್ಲ, ಇದು ಆರ್‌ಎಸ್‌ಎಸ್‌ನ ಕೇಂದ್ರವೇ. ಭಗವಾ ಧ್ವಜಕ್ಕೆ ನೀವು ಸದಾ ನಮಿಸಬೇಕು, ಅದನ್ನು ಗೌರವಿಸಬೇಕು. ಎಡ ಪಂಥೀಯರು ಇಲ್ಲಿ ಧ್ವನಿಯೆತ್ತಿದ್ದರೆ ಅವರನ್ನು ಯಾವ ರೀತಿ ಸದ್ದಡಗಿಸಬೇಕು ಎಂದು ನಾವು ಈ ಹಿಂದೆ ಹೇಳಿದ್ದೇವೆ. ಅದರಂತೆ ನೀವು ನಡೆದುಕೊಂಡಿದ್ದೀರಿ, ಅದು ಒಳ್ಳೆಯ ಬೆಳವಣಿಗೆ. ಇದರಿಂದ ಎಡ ಪಂಥೀಯರಿಗೆ ಒಂದಿಷ್ಟು ಭಯ ಬಂದಿದೆ. ನಿಮ್ಮ ಪ್ರತಿರೋಧವನ್ನು ಇನ್ನಷ್ಟು ತೀವ್ರಗೊಳಿಸಬೇಕು. ಕೇಂದ್ರದಲ್ಲಿ ನಮ್ಮ ಸರ್ಕಾರ ಇಲ್ಲ ಎಂಬ ಭಾವನೆ ಅವರಿಗೆ ಬಂದಿದೆ. ಒಂದು ರೀತಿಯಲ್ಲಿ ಜಾಸ್ತಿ ಗೆದ್ದಿದ್ದೀವಿ ಎನ್ನುವ ಉತ್ಸಾಹದಲ್ಲಿದ್ದಾರೆ. ಸಂವಿಧಾನ ಅಂತೆಲ್ಲ ಹೇಳುತ್ತಿದ್ದಾರೆ. ಹಾಗೇನು ಇಲ್ಲ, ಯಾರು ಬಂದರೂ, ನಮ್ಮದೆ ಅರ್‌ಎಸ್‌ಎಸ್‌, ನಮ್ಮದೇ ಸರ್ಕಾರ ನಡೆಯುವುದು. ನೀವು ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಎಷ್ಟು ಅಗುತ್ತೋ ಅಷ್ಟು ಅನುಷ್ಠಾನಗೊಳಿಸಿ. ಯಾರಾದರೂ ಪ್ರಾಧ್ಯಾಪಕರು ವಿರುದ್ದವಾಗಿ ನಡೆದುಕೊಂಡರೆ, ಅವರಿಗೆ ಮುಲಾಜಿಲ್ಲದೆ ನೋಟಿಸ್ ಕೊಡಿ. ವಿದ್ಯಾರ್ಥಿಗಳು ಪ್ರಶ್ನಿಸಿದರೆ, ಅವರ ಧ್ವನಿ ಅಡಗಿಸಿ. ಅದೂ ಅಗಿಲ್ಲ ಅಂದರೆ, ಬೇರೆ ರೀತಿಯ ಕ್ರಮ (ಪೊಲೀಸ್ ದೂರು ಇತ್ಯಾದಿ) ಕೈಗೊಳ್ಳಿ. ಇಲ್ಲಿ ಯಾರೇ ಸಚಿವ, ಸಂಸದ ಆದರೂ ನೀವು ಚಿಂತೆ ಮಾಡುವ ಅವಶ್ಯಕತೆಯಿಲ್ಲ” ಎಂದು ಹೇಳಿದ್ದಾಗಿ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ನರೇಂದ್ರ ದರಿಯಾ ಹಾಗೂ ರೋಹಿತ್ ಜೋಶಿ (ಪ್ರೊ. ಬಸವರಾಜ್ ಡೋಣುರ್ ಅವರ ಶಿಷ್ಯ) ಕೂಡಿಕೊಂಡು ಹಲ್ಲೆಗೆ ಮುಂದಾಗಿದ್ದಲ್ಲದೆ. ಮೊಬೈಲ್ ಕಸಿದುಕೊಂಡು ವಿಡಿಯೋ ಡಿಲೀಟ್ ಮಾಡು ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲವೆಂದು ಬೆದರಿಕೆ ಒಡ್ಡಿದ್ದಾರೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮ ಕಾನೂನಾತ್ಮಕವಾಗಿದ್ದರೆ, ಸಂವಿಧಾನ ಬದ್ದವಾಗಿದ್ದರೆ ಇಷ್ಟೊಂದು ಭಯದಿಂದ ಕಾರ್ಯಕ್ರಮ ಆಯೋಜನೆ ಮಾಡುವ ಅಶ್ಯಕತೆ ಏನಿದೆ? ಎಂದು ನಂದಕುಮಾರ ಪ್ರಶ್ನಿಸಿದ್ದಾರೆ.

“ವಿವಿಯಲ್ಲಿ ಶೈಕ್ಷಣಿಕವಾಗಿ ಏನು ನಡೆಯುತ್ತಿಲ್ಲ. ಕೇವಲ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯುತ್ತವೆ. ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಪರವಾಗಿದ್ದರೆ ಅವರನ್ನು ಸುಲಭವಾಗಿ ಪಾಸ್ ಮಾಡುತ್ತಾರೆ. ಪ್ರಾಧ್ಯಾಪಕರು ಒಬ್ಬ ವಿದ್ಯಾರ್ಥಿಯನ್ನು ಪಾಸ್ ಮಾಡಿದರೆ, ಆತನ ಹಿನ್ನೆಲೆ ತಿಳಿದುಕೊಂಡು (ಎಡ ಪಂಥೀಯನೋ, ಬಲ ಪಂಥೀಯನೋ) ಪರೀಕ್ಷಾ ಮುಖ್ಯ ಅಧಿಕಾರಿಗಳು ಅವರನ್ನು ಫೇಲ್ ಮಾಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ನಮಗೆ ಅಧಿಕಾರವಿದೆ ಎನ್ನುತ್ತಾರೆ. ಆರ್‌ಎಸ್‌ಎಸ್‌ ಪರವಾಗಿದ್ದರೆ ವಿದ್ಯಾರ್ಥಿಗಳು ಸಂಶೋಧನೆ ಮಾಡುವ, ತರಗತಿಗೆ ಹಾಜರಾಗುವ ಅಗತ್ಯವಿಲ್ಲ. ಸ್ವತಃ ಗೈಡ್‌ಗಳೇ ಮುಂದೆ ನಿಂತು ಕ್ಷೇತ್ರ ಕಾರ್ಯ ಸೇರಿದಂತೆ ಇನ್ನಿತರ ನೆಪದಲ್ಲಿ ನಾಗಪುರಕ್ಕೋ, ಉತ್ತರ ಪ್ರದೇಶಕ್ಕೋ ಆರ್‌ಎಸ್‌ಎಸ್‌ ಶಿಬಿರಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಿತ್ತಾರೆ” ಎಂದು ವಿವರಿಸಿದ್ದಾರೆ.

“ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಕುಬೂಕಡ್ಡಿ ತಮ್ಮ ಪರವಾಗಿರುವ ಅಥವಾ ಅರ್‌ಎಸ್‌ಎಸ್‌ ಪರವಾಗಿರುವ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಕೊಡುವುದು, ಇತರ ವಿದ್ಯಾರ್ಥಿಗಳನ್ನು ಕಡೆಗಣಿಸುವುದನ್ನು ಮಾಡುತ್ತಾರೆ. ಈ ಬಗ್ಗೆಯೆಲ್ಲ ಪ್ರಶ್ನಿಸಿದರೆ ವಿದ್ಯಾರ್ಥಿಗಳನ್ನು ಅಮಾನತು ಮಾಡುವುದು, ಪೊಲೀಸ್ ದೂರು ದಾಖಲಿಸುವುದು ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಿಬ್ಬಂದಿ ಆಂಧ್ರ ಮೂಲದವರು :

ಕರ್ನಾಟಕಕ್ಕಾಗಿ, ವಿಶೇಷವಾಗಿ ಉತ್ತರ ಕರ್ನಾಟಕದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವಿ ಸ್ಥಾಪನೆ ಮಾಡಿದ್ದರೂ, ಶೇ. 75ರಷ್ಟು ಸಿಬ್ಬಂದಿ ಆಂಧ್ರ ಪ್ರದೇಶ ಮೂಲದವರಿದ್ದಾರೆ. ಈ ರೀತಿಯಾದರೆ ಉತ್ತರ ಕರ್ನಾಟಕದವರಿಗೆ ವಿವಿಯಿಂದ ಏನು ಪ್ರಯೋಜನವಾಗಲಿದೆ? ಎಂದು ನಂದಕುಮಾರ ಪ್ರಶ್ನಿಸಿದ್ದಾರೆ.

ಪ್ರಶ್ನಿಸಿದರೆ ದಬ್ಬಾಳಿಕೆ

“ವಿವಿಯಲ್ಲಿ ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಕಾರ್ಯಕ್ರಮ ನಡೆಸಲು ಅವಕಾಶವಿದೆಯೇ?” ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ನಂದಕುಮಾರ ಅವರು, “ವಿವಿಯಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಇಲ್ಲ. ಆದರೆ, ಇಲ್ಲಿ ಆರ್‌ಎಸ್‌ಎಸ್‌ಗೆ ಅವಕಾಶ ನೀಡಿದ್ದಾರೆ. ಈ ಹಿಂದೆಯೊಮ್ಮೆ ಆರ್‌ಎಸ್‌ಎಸ್‌ನ ಸಭೆಯನ್ನು ವಿವಿಯ ಅತಿಥಿ ಗೃಹದಲ್ಲಿ ಆಯೋಜಿಸಿದ್ದರು. ಈ ವೇಳೆ ನಾವು ಅಂಬೇಡ್ಕರ್‌ವಾದ ವಿದ್ಯಾರ್ಥಿ ಸಂಘಟನೆಗೆ ಸಂಬಂಧಿಸಿದ ಸಭೆ ನಡೆಸಲು ಅನುಮತಿ ಕೇಳಿದ್ದೆವು. ಆ ಸಂದರ್ಭದಲ್ಲಿ ಕುಲ ಸಚಿವರು ಆರ್‌ಎಸ್‌ಎಸ್‌ ಸಭೆಯನ್ನು ರದ್ದುಪಡಿಸಿದ್ದರು. ಇದಾಗಿ ಅರ್ಧ ಗಂಟೆಯ ಬಳಿಕ ಇತಿಹಾಸ ವಿಭಾಗದ ಮುಖ್ಯಸ್ಥ ರವಿ ಕುಮಾರ್ ಎಂಬವರು ವಿಭಾಗದ ಒಳಗಡೆ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರು. ಈ ಬಗ್ಗೆ ನಾವು ಕುಲಸಚಿವರನ್ನು ಪ್ರಶ್ನಿಸಿದಾಗ ” ಇಲ್ಲ ಯಾರೂ ಸಭೆಗೆ ಅನುಮತಿ ಕೊಟ್ಟಿದ್ದಾರೋ ಅವರ ವಿರುದ್ದ ನಾನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದರು”. ಆದರೆ, ಮರುದಿನ ಪ್ರಶ್ನೆ ಮಾಡಿದ್ದ ನಮ್ಮ ಪಿಹೆಚ್‌ಡಿ ರದ್ದುಪಡಿಸಿ ವಿವಿ ಪ್ರವೇಶಕ್ಕೆ ತಡೆಯೊಡ್ಡಿದ್ದರು” ಎಂದು ಹೇಳಿದ್ದಾರೆ.

“ವಿಶ್ವ ವಿದ್ಯಾಲಯದ ಎಲ್ಲಾ ಆಯ ಕಟ್ಟಿನ ಸ್ಥಳಗಳನ್ನು ಅಕ್ರಮಿಸಿಕೊಂಡು ಅಧಿಕಾರದಲ್ಲಿ ಆರ್‌ಎಸ್‌ಎಸ್‌ನ ಮತಾಂದರೆ ತುಂಬಿದ್ದಾರೆ. ಶರಣರ, ಸೂಫಿ ಸಂತರ, ತತ್ವಪದಕಾರರ ಸೌಹಾರ್ದ ಪರಂಪರೆಯ ನಮ್ಮ ಈ ಭಾಗದ ವಿದ್ಯಾರ್ಥಿಗಳು ಇಂತಹ ಪ್ರಾಧ್ಯಾಪಕರಿಂದ ಏನು ಕಲಿಯುವರು ಎಂಬುವುದನ್ನು ಊಹಿಸಿದರೆ ಆತಂಕವಾಗುತ್ತದೆ. ಹಾಗಾಗಿ, ಈ ವಿಶ್ವವಿದ್ಯಾಲಯಕ್ಕೆ ಆರ್‌ಎಸ್‌ಎಸ್ ಕೇಂದ್ರೀಯ ಕಚೇರಿ ವಿಶ್ವವಿದ್ಯಾಲಯ ಅಂತ ಹೆಸರು ಇಡುವುದೇ ಸೂಕ್ತ ಎನ್ನಿಸುತ್ತಿದೆ” ಎಂದು ನಂದಕುಮಾರ ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ : ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...