Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಬಹಿರಂಗವಾಗಿ ನಡೆಯುತ್ತಿದ್ದು, ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ಗುರಿಯಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜುಲೈ 18, 2024ರಂದು ವಿಶ್ವ ವಿದ್ಯಾಲಯದ ಅತಿಥಿ ಗೃಹದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರವೊಂದು ನಡೆದಿದ್ದು, ಕುಲಸಚಿವ ಆರ್.ಆರ್ ಬಿರಾದಾರ, ಶೈಕ್ಷಣಿಕ ನಿರ್ದೇಶಕ ಪ್ರೊ. ಬಸವಾರಾಜ್ ಡೋಣುರ್, ವಿವಿ ಅಭಿವೃದ್ಧಿ ಅಧಿಕಾರಿ ಪ್ರೊ. ಚನ್ನವೀರಯ್ಯ, ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಕುಬೂಕಡ್ಡಿ , ಚಿಫ್ ವಾರ್ಡನ್ ಡಾ. ಬಸವಾರಾಜ್ ಸೋಮನಮರಡಿ, ವಿವಿ ಶಿಸ್ತು ಪಾಲನಾ ಅಧಿಕಾರಿ ವೆಂಕಟರಮಣ ದೊಡ್ಡಿ, ಪರೀಕ್ಷಾ ಮುಖ್ಯ ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಪಾಲ್ಗೊಂಡು ಭಗವಾಧ್ವಜಕ್ಕೆ ನಮಿಸಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿ ನಂದಕುಮಾರ ಪಿ ಆರೋಪಿಸಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅವರು, ಆರ್‌ಎಸ್‌ಎಸ್‌ನ 100ನೇ ವರ್ಷಾಚರಣೆ ನಿಮಿತ್ತ ದಕ್ಷಿಣ ಭಾರತದಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಿದ್ದಾರೆ. ಅದರ ಭಾಗವಾಗಿ ಕೇಂದ್ರೀಯ ವಿವಿಯಲ್ಲಿ ಸಿದ್ದತಾ ಕಾರ್ಯಕ್ರಮ ಆಯೋಜಿಸಿದ್ದರು ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ನಾಗಪುರದಿಂದ ಆಗಮಿಸಿದ್ದ ಕೆಲವರು ಹಿಂದಿಯಲ್ಲಿ ಭಾಷಣ ಮಾಡಿದ್ದು, “ವಿವಿ ಆರ್‌ಎಸ್‌ಎಸ್‌ ಕೇಂದ್ರ ಎನ್ನುವುದನ್ನು ಪದೇ ಪದೇ ಗುರುತಿಸುವ ಅಗತ್ಯವಿಲ್ಲ, ಇದು ಆರ್‌ಎಸ್‌ಎಸ್‌ನ ಕೇಂದ್ರವೇ. ಭಗವಾ ಧ್ವಜಕ್ಕೆ ನೀವು ಸದಾ ನಮಿಸಬೇಕು, ಅದನ್ನು ಗೌರವಿಸಬೇಕು. ಎಡ ಪಂಥೀಯರು ಇಲ್ಲಿ ಧ್ವನಿಯೆತ್ತಿದ್ದರೆ ಅವರನ್ನು ಯಾವ ರೀತಿ ಸದ್ದಡಗಿಸಬೇಕು ಎಂದು ನಾವು ಈ ಹಿಂದೆ ಹೇಳಿದ್ದೇವೆ. ಅದರಂತೆ ನೀವು ನಡೆದುಕೊಂಡಿದ್ದೀರಿ, ಅದು ಒಳ್ಳೆಯ ಬೆಳವಣಿಗೆ. ಇದರಿಂದ ಎಡ ಪಂಥೀಯರಿಗೆ ಒಂದಿಷ್ಟು ಭಯ ಬಂದಿದೆ. ನಿಮ್ಮ ಪ್ರತಿರೋಧವನ್ನು ಇನ್ನಷ್ಟು ತೀವ್ರಗೊಳಿಸಬೇಕು. ಕೇಂದ್ರದಲ್ಲಿ ನಮ್ಮ ಸರ್ಕಾರ ಇಲ್ಲ ಎಂಬ ಭಾವನೆ ಅವರಿಗೆ ಬಂದಿದೆ. ಒಂದು ರೀತಿಯಲ್ಲಿ ಜಾಸ್ತಿ ಗೆದ್ದಿದ್ದೀವಿ ಎನ್ನುವ ಉತ್ಸಾಹದಲ್ಲಿದ್ದಾರೆ. ಸಂವಿಧಾನ ಅಂತೆಲ್ಲ ಹೇಳುತ್ತಿದ್ದಾರೆ. ಹಾಗೇನು ಇಲ್ಲ, ಯಾರು ಬಂದರೂ, ನಮ್ಮದೆ ಅರ್‌ಎಸ್‌ಎಸ್‌, ನಮ್ಮದೇ ಸರ್ಕಾರ ನಡೆಯುವುದು. ನೀವು ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಎಷ್ಟು ಅಗುತ್ತೋ ಅಷ್ಟು ಅನುಷ್ಠಾನಗೊಳಿಸಿ. ಯಾರಾದರೂ ಪ್ರಾಧ್ಯಾಪಕರು ವಿರುದ್ದವಾಗಿ ನಡೆದುಕೊಂಡರೆ, ಅವರಿಗೆ ಮುಲಾಜಿಲ್ಲದೆ ನೋಟಿಸ್ ಕೊಡಿ. ವಿದ್ಯಾರ್ಥಿಗಳು ಪ್ರಶ್ನಿಸಿದರೆ, ಅವರ ಧ್ವನಿ ಅಡಗಿಸಿ. ಅದೂ ಅಗಿಲ್ಲ ಅಂದರೆ, ಬೇರೆ ರೀತಿಯ ಕ್ರಮ (ಪೊಲೀಸ್ ದೂರು ಇತ್ಯಾದಿ) ಕೈಗೊಳ್ಳಿ. ಇಲ್ಲಿ ಯಾರೇ ಸಚಿವ, ಸಂಸದ ಆದರೂ ನೀವು ಚಿಂತೆ ಮಾಡುವ ಅವಶ್ಯಕತೆಯಿಲ್ಲ” ಎಂದು ಹೇಳಿದ್ದಾಗಿ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ನರೇಂದ್ರ ದರಿಯಾ ಹಾಗೂ ರೋಹಿತ್ ಜೋಶಿ (ಪ್ರೊ. ಬಸವರಾಜ್ ಡೋಣುರ್ ಅವರ ಶಿಷ್ಯ) ಕೂಡಿಕೊಂಡು ಹಲ್ಲೆಗೆ ಮುಂದಾಗಿದ್ದಲ್ಲದೆ. ಮೊಬೈಲ್ ಕಸಿದುಕೊಂಡು ವಿಡಿಯೋ ಡಿಲೀಟ್ ಮಾಡು ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲವೆಂದು ಬೆದರಿಕೆ ಒಡ್ಡಿದ್ದಾರೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮ ಕಾನೂನಾತ್ಮಕವಾಗಿದ್ದರೆ, ಸಂವಿಧಾನ ಬದ್ದವಾಗಿದ್ದರೆ ಇಷ್ಟೊಂದು ಭಯದಿಂದ ಕಾರ್ಯಕ್ರಮ ಆಯೋಜನೆ ಮಾಡುವ ಅಶ್ಯಕತೆ ಏನಿದೆ? ಎಂದು ನಂದಕುಮಾರ ಪ್ರಶ್ನಿಸಿದ್ದಾರೆ.

“ವಿವಿಯಲ್ಲಿ ಶೈಕ್ಷಣಿಕವಾಗಿ ಏನು ನಡೆಯುತ್ತಿಲ್ಲ. ಕೇವಲ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯುತ್ತವೆ. ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಪರವಾಗಿದ್ದರೆ ಅವರನ್ನು ಸುಲಭವಾಗಿ ಪಾಸ್ ಮಾಡುತ್ತಾರೆ. ಪ್ರಾಧ್ಯಾಪಕರು ಒಬ್ಬ ವಿದ್ಯಾರ್ಥಿಯನ್ನು ಪಾಸ್ ಮಾಡಿದರೆ, ಆತನ ಹಿನ್ನೆಲೆ ತಿಳಿದುಕೊಂಡು (ಎಡ ಪಂಥೀಯನೋ, ಬಲ ಪಂಥೀಯನೋ) ಪರೀಕ್ಷಾ ಮುಖ್ಯ ಅಧಿಕಾರಿಗಳು ಅವರನ್ನು ಫೇಲ್ ಮಾಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ನಮಗೆ ಅಧಿಕಾರವಿದೆ ಎನ್ನುತ್ತಾರೆ. ಆರ್‌ಎಸ್‌ಎಸ್‌ ಪರವಾಗಿದ್ದರೆ ವಿದ್ಯಾರ್ಥಿಗಳು ಸಂಶೋಧನೆ ಮಾಡುವ, ತರಗತಿಗೆ ಹಾಜರಾಗುವ ಅಗತ್ಯವಿಲ್ಲ. ಸ್ವತಃ ಗೈಡ್‌ಗಳೇ ಮುಂದೆ ನಿಂತು ಕ್ಷೇತ್ರ ಕಾರ್ಯ ಸೇರಿದಂತೆ ಇನ್ನಿತರ ನೆಪದಲ್ಲಿ ನಾಗಪುರಕ್ಕೋ, ಉತ್ತರ ಪ್ರದೇಶಕ್ಕೋ ಆರ್‌ಎಸ್‌ಎಸ್‌ ಶಿಬಿರಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಿತ್ತಾರೆ” ಎಂದು ವಿವರಿಸಿದ್ದಾರೆ.

“ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಕುಬೂಕಡ್ಡಿ ತಮ್ಮ ಪರವಾಗಿರುವ ಅಥವಾ ಅರ್‌ಎಸ್‌ಎಸ್‌ ಪರವಾಗಿರುವ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಕೊಡುವುದು, ಇತರ ವಿದ್ಯಾರ್ಥಿಗಳನ್ನು ಕಡೆಗಣಿಸುವುದನ್ನು ಮಾಡುತ್ತಾರೆ. ಈ ಬಗ್ಗೆಯೆಲ್ಲ ಪ್ರಶ್ನಿಸಿದರೆ ವಿದ್ಯಾರ್ಥಿಗಳನ್ನು ಅಮಾನತು ಮಾಡುವುದು, ಪೊಲೀಸ್ ದೂರು ದಾಖಲಿಸುವುದು ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಿಬ್ಬಂದಿ ಆಂಧ್ರ ಮೂಲದವರು :

ಕರ್ನಾಟಕಕ್ಕಾಗಿ, ವಿಶೇಷವಾಗಿ ಉತ್ತರ ಕರ್ನಾಟಕದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವಿ ಸ್ಥಾಪನೆ ಮಾಡಿದ್ದರೂ, ಶೇ. 75ರಷ್ಟು ಸಿಬ್ಬಂದಿ ಆಂಧ್ರ ಪ್ರದೇಶ ಮೂಲದವರಿದ್ದಾರೆ. ಈ ರೀತಿಯಾದರೆ ಉತ್ತರ ಕರ್ನಾಟಕದವರಿಗೆ ವಿವಿಯಿಂದ ಏನು ಪ್ರಯೋಜನವಾಗಲಿದೆ? ಎಂದು ನಂದಕುಮಾರ ಪ್ರಶ್ನಿಸಿದ್ದಾರೆ.

ಪ್ರಶ್ನಿಸಿದರೆ ದಬ್ಬಾಳಿಕೆ

“ವಿವಿಯಲ್ಲಿ ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಕಾರ್ಯಕ್ರಮ ನಡೆಸಲು ಅವಕಾಶವಿದೆಯೇ?” ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ನಂದಕುಮಾರ ಅವರು, “ವಿವಿಯಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಇಲ್ಲ. ಆದರೆ, ಇಲ್ಲಿ ಆರ್‌ಎಸ್‌ಎಸ್‌ಗೆ ಅವಕಾಶ ನೀಡಿದ್ದಾರೆ. ಈ ಹಿಂದೆಯೊಮ್ಮೆ ಆರ್‌ಎಸ್‌ಎಸ್‌ನ ಸಭೆಯನ್ನು ವಿವಿಯ ಅತಿಥಿ ಗೃಹದಲ್ಲಿ ಆಯೋಜಿಸಿದ್ದರು. ಈ ವೇಳೆ ನಾವು ಅಂಬೇಡ್ಕರ್‌ವಾದ ವಿದ್ಯಾರ್ಥಿ ಸಂಘಟನೆಗೆ ಸಂಬಂಧಿಸಿದ ಸಭೆ ನಡೆಸಲು ಅನುಮತಿ ಕೇಳಿದ್ದೆವು. ಆ ಸಂದರ್ಭದಲ್ಲಿ ಕುಲ ಸಚಿವರು ಆರ್‌ಎಸ್‌ಎಸ್‌ ಸಭೆಯನ್ನು ರದ್ದುಪಡಿಸಿದ್ದರು. ಇದಾಗಿ ಅರ್ಧ ಗಂಟೆಯ ಬಳಿಕ ಇತಿಹಾಸ ವಿಭಾಗದ ಮುಖ್ಯಸ್ಥ ರವಿ ಕುಮಾರ್ ಎಂಬವರು ವಿಭಾಗದ ಒಳಗಡೆ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರು. ಈ ಬಗ್ಗೆ ನಾವು ಕುಲಸಚಿವರನ್ನು ಪ್ರಶ್ನಿಸಿದಾಗ ” ಇಲ್ಲ ಯಾರೂ ಸಭೆಗೆ ಅನುಮತಿ ಕೊಟ್ಟಿದ್ದಾರೋ ಅವರ ವಿರುದ್ದ ನಾನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದರು”. ಆದರೆ, ಮರುದಿನ ಪ್ರಶ್ನೆ ಮಾಡಿದ್ದ ನಮ್ಮ ಪಿಹೆಚ್‌ಡಿ ರದ್ದುಪಡಿಸಿ ವಿವಿ ಪ್ರವೇಶಕ್ಕೆ ತಡೆಯೊಡ್ಡಿದ್ದರು” ಎಂದು ಹೇಳಿದ್ದಾರೆ.

“ವಿಶ್ವ ವಿದ್ಯಾಲಯದ ಎಲ್ಲಾ ಆಯ ಕಟ್ಟಿನ ಸ್ಥಳಗಳನ್ನು ಅಕ್ರಮಿಸಿಕೊಂಡು ಅಧಿಕಾರದಲ್ಲಿ ಆರ್‌ಎಸ್‌ಎಸ್‌ನ ಮತಾಂದರೆ ತುಂಬಿದ್ದಾರೆ. ಶರಣರ, ಸೂಫಿ ಸಂತರ, ತತ್ವಪದಕಾರರ ಸೌಹಾರ್ದ ಪರಂಪರೆಯ ನಮ್ಮ ಈ ಭಾಗದ ವಿದ್ಯಾರ್ಥಿಗಳು ಇಂತಹ ಪ್ರಾಧ್ಯಾಪಕರಿಂದ ಏನು ಕಲಿಯುವರು ಎಂಬುವುದನ್ನು ಊಹಿಸಿದರೆ ಆತಂಕವಾಗುತ್ತದೆ. ಹಾಗಾಗಿ, ಈ ವಿಶ್ವವಿದ್ಯಾಲಯಕ್ಕೆ ಆರ್‌ಎಸ್‌ಎಸ್ ಕೇಂದ್ರೀಯ ಕಚೇರಿ ವಿಶ್ವವಿದ್ಯಾಲಯ ಅಂತ ಹೆಸರು ಇಡುವುದೇ ಸೂಕ್ತ ಎನ್ನಿಸುತ್ತಿದೆ” ಎಂದು ನಂದಕುಮಾರ ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ : ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...