Homeಮುಖಪುಟದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

- Advertisement -
- Advertisement -

“ಈ ಜನರು ನನ್ನ ತಂದೆಯನ್ನು ಕೊಂದಂತೆ ನನ್ನನ್ನು ಮತ್ತು ನನ್ನ ಕುಟುಂಬವನ್ನು ಕೊಲ್ಲುತ್ತಾರೆ ಎಂದು ನನಗೆ ಭಯವಾಗುತ್ತಿದೆ. ಈ ದೂರನ್ನು ನೋಂದಾಯಿಸಲು ನನ್ನ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸುತ್ತಿದ್ದೇನೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಸಾಹಿಲ್ ಪರ್ವೇಜ್ ಮಾರ್ಚ್ 19 ರಂದು ಈಶಾನ್ಯ ದೆಹಲಿ ಗಲಭೆಯ ನಂತರ ಸ್ಥಾಪಿಸಲಾದ ಇಡ್ಗಾ ಪರಿಹಾರ ಶಿಬಿರದಲ್ಲಿ ನೀಡಿದ ದೂರಿನಲ್ಲಿ ಬರೆದಿದ್ದಾರೆ.

ಫೆಬ್ರವರಿ 25 ರಂದು ಅವರ ತಂದೆಯ ಮರಣದ ಸಮಯದಲ್ಲಿ, ಎಫ್‌ಐಆರ್‌ನಲ್ಲಿ ಐಪಿಸಿ (ಕೊಲೆ) ಯ ಸೆಕ್ಷನ್ 302 ಅನ್ನು ಮಾತ್ರ ಲಗತ್ತಿಸಿತ್ತು, ಆದರೆ ಸಾಹಿಲ್ ಅವರ ವಿವರವಾದ ದೂರಿನ ನಂತರ ಸಂಬಂಧಿತ ಸೆಕ್ಷನ್‌ಗಳನ್ನು ಅಸ್ತಿತ್ವದಲ್ಲಿರುವ ಎಫ್‌ಐಆರ್‌ಗೆ ಸೇರಿಸಲಾಗಿದೆ. ಪರಿಣಾಮವಾಗಿ, ಉತ್ತರ ಘೋಂಡಾದಿಂದ ಇಪ್ಪತ್ತಕ್ಕೂ ಹೆಚ್ಚು ಜನರನ್ನು ಪ್ರಶ್ನಿಸಲಾಯಿತು ಮತ್ತು 16 ಜನರನ್ನು ಬಂಧಿಸಲಾಯಿತು ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಈ ಹದಿನಾರು ಆರೋಪಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ಹೊಂದಿದ್ದರು ಎನ್ನಲಾಗಿದೆ.

ಕೊಲೆ (ಸೆಕ್ಷನ್ 302), ಗಲಭೆ (ಸೆಕ್ಷನ್ 147), ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತವಾದ ಗಲಭೆ (ಸೆಕ್ಷನ್ 148), ಕಾನೂನುಬಾಹಿರ ಗುಂಪುಸೇರುವಿಕೆ (ಸೆಕ್ಷನ್ 149) ಮತ್ತು ಕ್ರಿಮಿನಲ್ ಪಿತೂರಿ (ಸೆಕ್ಷನ್ 120 ಬಿ) ಸೆಕ್ಷನ್‌ಗಳನ್ನು ಹಾಕಿ ಏಪ್ರಿಲ್ 9 ರಂದು ಬಂಧಿಸಲಾಯಿತು. ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಸಲಾಗಿದೆ.

ದಿ ಕ್ವಿಂಟ್‌ ದೆಹಲಿ ಗಲಭೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ಮೆಲುಕು ಹಾಕುತ್ತಿದೆ. ಏಕೆಂದರೆ ಇತ್ತೀಚೆಗೆ ಪೊಲೀಸರು ಸಲ್ಲಿಸುತ್ತಿರುವ ಚಾರ್ಜ್‌‌ಶೀಟ್‌ಗಳಲ್ಲಿ ಕೇವಲ ಪ್ರಗತಿಪರ, ಎಡಪಂಥೀಯ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ದೋಷಾರೋಪಣೆ ಮಾಡಿದ್ದು, ಗಲಭೆಗೆ ಪ್ರಚೋದನೆ ನೀಡಿದ ಮತ್ತು ಗಲಭೆಯಲ್ಲಿ ಭಾಗವಹಿಸಿದ ಬಿಜೆಪಿ ಮತ್ತು ಅದರ ಅಂಗಸಂಘಟನೆಗಳ ಸದಸ್ಯರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ.

ತನ್ನ ದೂರಿನಲ್ಲಿ ಪರ್ವೇಜ್ ಹೆಸರಿಸಿರುವ ದೇವೇಶ್ ಮಿಶ್ರಾ ಅವರನ್ನು ಇನ್ನೂ ಬಂಧಿಸಿಲ್ಲ ಅಥವಾ ಚಾರ್ಜ್‌ಶೀಟ್ ನಲ್ಲಿ ಅವರನ್ನು ಉಲ್ಲೇಖಿಸಿಲ್ಲ. ಅವರು 1996 ರಿಂದ ಸಂಘದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಕಳೆದ ಎಂಟು ವರ್ಷಗಳಿಂದ ಆರ್‌ಎಸ್‌ಎಸ್‌ನ ಯಮುನಾ ವಿಹಾರ್ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರನ್ನು ವಿಶ್ವ ಹಿಂದೂ ಪರಿಷತ್‌ಗೆ ಸ್ಥಳಾಂತರಿಸಲಾಯಿತು ಮತ್ತು ಈಗ ಅವರ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ದೂರಿನಲ್ಲಿ ಹೆಸರಿಸಲಾದ ಇನ್ನೊಬ್ಬ ವ್ಯಕ್ತಿ ಸುಭಾಷ್ ತ್ಯಾಗಿಯನ್ನು ಸಹ ಇದುವರೆಗೆ ಬಂಧಿಸಿಲ್ಲ. ಇವರು ಕೂಡ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ಕ್ವಿಂಟ್ ವರದಿ ಓದಿ


ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...