Homeಮುಖಪುಟದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

- Advertisement -
- Advertisement -

“ಈ ಜನರು ನನ್ನ ತಂದೆಯನ್ನು ಕೊಂದಂತೆ ನನ್ನನ್ನು ಮತ್ತು ನನ್ನ ಕುಟುಂಬವನ್ನು ಕೊಲ್ಲುತ್ತಾರೆ ಎಂದು ನನಗೆ ಭಯವಾಗುತ್ತಿದೆ. ಈ ದೂರನ್ನು ನೋಂದಾಯಿಸಲು ನನ್ನ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸುತ್ತಿದ್ದೇನೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಸಾಹಿಲ್ ಪರ್ವೇಜ್ ಮಾರ್ಚ್ 19 ರಂದು ಈಶಾನ್ಯ ದೆಹಲಿ ಗಲಭೆಯ ನಂತರ ಸ್ಥಾಪಿಸಲಾದ ಇಡ್ಗಾ ಪರಿಹಾರ ಶಿಬಿರದಲ್ಲಿ ನೀಡಿದ ದೂರಿನಲ್ಲಿ ಬರೆದಿದ್ದಾರೆ.

ಫೆಬ್ರವರಿ 25 ರಂದು ಅವರ ತಂದೆಯ ಮರಣದ ಸಮಯದಲ್ಲಿ, ಎಫ್‌ಐಆರ್‌ನಲ್ಲಿ ಐಪಿಸಿ (ಕೊಲೆ) ಯ ಸೆಕ್ಷನ್ 302 ಅನ್ನು ಮಾತ್ರ ಲಗತ್ತಿಸಿತ್ತು, ಆದರೆ ಸಾಹಿಲ್ ಅವರ ವಿವರವಾದ ದೂರಿನ ನಂತರ ಸಂಬಂಧಿತ ಸೆಕ್ಷನ್‌ಗಳನ್ನು ಅಸ್ತಿತ್ವದಲ್ಲಿರುವ ಎಫ್‌ಐಆರ್‌ಗೆ ಸೇರಿಸಲಾಗಿದೆ. ಪರಿಣಾಮವಾಗಿ, ಉತ್ತರ ಘೋಂಡಾದಿಂದ ಇಪ್ಪತ್ತಕ್ಕೂ ಹೆಚ್ಚು ಜನರನ್ನು ಪ್ರಶ್ನಿಸಲಾಯಿತು ಮತ್ತು 16 ಜನರನ್ನು ಬಂಧಿಸಲಾಯಿತು ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಈ ಹದಿನಾರು ಆರೋಪಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ಹೊಂದಿದ್ದರು ಎನ್ನಲಾಗಿದೆ.

ಕೊಲೆ (ಸೆಕ್ಷನ್ 302), ಗಲಭೆ (ಸೆಕ್ಷನ್ 147), ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತವಾದ ಗಲಭೆ (ಸೆಕ್ಷನ್ 148), ಕಾನೂನುಬಾಹಿರ ಗುಂಪುಸೇರುವಿಕೆ (ಸೆಕ್ಷನ್ 149) ಮತ್ತು ಕ್ರಿಮಿನಲ್ ಪಿತೂರಿ (ಸೆಕ್ಷನ್ 120 ಬಿ) ಸೆಕ್ಷನ್‌ಗಳನ್ನು ಹಾಕಿ ಏಪ್ರಿಲ್ 9 ರಂದು ಬಂಧಿಸಲಾಯಿತು. ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಸಲಾಗಿದೆ.

ದಿ ಕ್ವಿಂಟ್‌ ದೆಹಲಿ ಗಲಭೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ಮೆಲುಕು ಹಾಕುತ್ತಿದೆ. ಏಕೆಂದರೆ ಇತ್ತೀಚೆಗೆ ಪೊಲೀಸರು ಸಲ್ಲಿಸುತ್ತಿರುವ ಚಾರ್ಜ್‌‌ಶೀಟ್‌ಗಳಲ್ಲಿ ಕೇವಲ ಪ್ರಗತಿಪರ, ಎಡಪಂಥೀಯ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ದೋಷಾರೋಪಣೆ ಮಾಡಿದ್ದು, ಗಲಭೆಗೆ ಪ್ರಚೋದನೆ ನೀಡಿದ ಮತ್ತು ಗಲಭೆಯಲ್ಲಿ ಭಾಗವಹಿಸಿದ ಬಿಜೆಪಿ ಮತ್ತು ಅದರ ಅಂಗಸಂಘಟನೆಗಳ ಸದಸ್ಯರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ.

ತನ್ನ ದೂರಿನಲ್ಲಿ ಪರ್ವೇಜ್ ಹೆಸರಿಸಿರುವ ದೇವೇಶ್ ಮಿಶ್ರಾ ಅವರನ್ನು ಇನ್ನೂ ಬಂಧಿಸಿಲ್ಲ ಅಥವಾ ಚಾರ್ಜ್‌ಶೀಟ್ ನಲ್ಲಿ ಅವರನ್ನು ಉಲ್ಲೇಖಿಸಿಲ್ಲ. ಅವರು 1996 ರಿಂದ ಸಂಘದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಕಳೆದ ಎಂಟು ವರ್ಷಗಳಿಂದ ಆರ್‌ಎಸ್‌ಎಸ್‌ನ ಯಮುನಾ ವಿಹಾರ್ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರನ್ನು ವಿಶ್ವ ಹಿಂದೂ ಪರಿಷತ್‌ಗೆ ಸ್ಥಳಾಂತರಿಸಲಾಯಿತು ಮತ್ತು ಈಗ ಅವರ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ದೂರಿನಲ್ಲಿ ಹೆಸರಿಸಲಾದ ಇನ್ನೊಬ್ಬ ವ್ಯಕ್ತಿ ಸುಭಾಷ್ ತ್ಯಾಗಿಯನ್ನು ಸಹ ಇದುವರೆಗೆ ಬಂಧಿಸಿಲ್ಲ. ಇವರು ಕೂಡ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ಕ್ವಿಂಟ್ ವರದಿ ಓದಿ


ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...