Homeಮುಖಪುಟದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

- Advertisement -
- Advertisement -

“ಈ ಜನರು ನನ್ನ ತಂದೆಯನ್ನು ಕೊಂದಂತೆ ನನ್ನನ್ನು ಮತ್ತು ನನ್ನ ಕುಟುಂಬವನ್ನು ಕೊಲ್ಲುತ್ತಾರೆ ಎಂದು ನನಗೆ ಭಯವಾಗುತ್ತಿದೆ. ಈ ದೂರನ್ನು ನೋಂದಾಯಿಸಲು ನನ್ನ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸುತ್ತಿದ್ದೇನೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಸಾಹಿಲ್ ಪರ್ವೇಜ್ ಮಾರ್ಚ್ 19 ರಂದು ಈಶಾನ್ಯ ದೆಹಲಿ ಗಲಭೆಯ ನಂತರ ಸ್ಥಾಪಿಸಲಾದ ಇಡ್ಗಾ ಪರಿಹಾರ ಶಿಬಿರದಲ್ಲಿ ನೀಡಿದ ದೂರಿನಲ್ಲಿ ಬರೆದಿದ್ದಾರೆ.

ಫೆಬ್ರವರಿ 25 ರಂದು ಅವರ ತಂದೆಯ ಮರಣದ ಸಮಯದಲ್ಲಿ, ಎಫ್‌ಐಆರ್‌ನಲ್ಲಿ ಐಪಿಸಿ (ಕೊಲೆ) ಯ ಸೆಕ್ಷನ್ 302 ಅನ್ನು ಮಾತ್ರ ಲಗತ್ತಿಸಿತ್ತು, ಆದರೆ ಸಾಹಿಲ್ ಅವರ ವಿವರವಾದ ದೂರಿನ ನಂತರ ಸಂಬಂಧಿತ ಸೆಕ್ಷನ್‌ಗಳನ್ನು ಅಸ್ತಿತ್ವದಲ್ಲಿರುವ ಎಫ್‌ಐಆರ್‌ಗೆ ಸೇರಿಸಲಾಗಿದೆ. ಪರಿಣಾಮವಾಗಿ, ಉತ್ತರ ಘೋಂಡಾದಿಂದ ಇಪ್ಪತ್ತಕ್ಕೂ ಹೆಚ್ಚು ಜನರನ್ನು ಪ್ರಶ್ನಿಸಲಾಯಿತು ಮತ್ತು 16 ಜನರನ್ನು ಬಂಧಿಸಲಾಯಿತು ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಈ ಹದಿನಾರು ಆರೋಪಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ಹೊಂದಿದ್ದರು ಎನ್ನಲಾಗಿದೆ.

ಕೊಲೆ (ಸೆಕ್ಷನ್ 302), ಗಲಭೆ (ಸೆಕ್ಷನ್ 147), ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತವಾದ ಗಲಭೆ (ಸೆಕ್ಷನ್ 148), ಕಾನೂನುಬಾಹಿರ ಗುಂಪುಸೇರುವಿಕೆ (ಸೆಕ್ಷನ್ 149) ಮತ್ತು ಕ್ರಿಮಿನಲ್ ಪಿತೂರಿ (ಸೆಕ್ಷನ್ 120 ಬಿ) ಸೆಕ್ಷನ್‌ಗಳನ್ನು ಹಾಕಿ ಏಪ್ರಿಲ್ 9 ರಂದು ಬಂಧಿಸಲಾಯಿತು. ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಸಲಾಗಿದೆ.

ದಿ ಕ್ವಿಂಟ್‌ ದೆಹಲಿ ಗಲಭೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ಮೆಲುಕು ಹಾಕುತ್ತಿದೆ. ಏಕೆಂದರೆ ಇತ್ತೀಚೆಗೆ ಪೊಲೀಸರು ಸಲ್ಲಿಸುತ್ತಿರುವ ಚಾರ್ಜ್‌‌ಶೀಟ್‌ಗಳಲ್ಲಿ ಕೇವಲ ಪ್ರಗತಿಪರ, ಎಡಪಂಥೀಯ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ದೋಷಾರೋಪಣೆ ಮಾಡಿದ್ದು, ಗಲಭೆಗೆ ಪ್ರಚೋದನೆ ನೀಡಿದ ಮತ್ತು ಗಲಭೆಯಲ್ಲಿ ಭಾಗವಹಿಸಿದ ಬಿಜೆಪಿ ಮತ್ತು ಅದರ ಅಂಗಸಂಘಟನೆಗಳ ಸದಸ್ಯರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ.

ತನ್ನ ದೂರಿನಲ್ಲಿ ಪರ್ವೇಜ್ ಹೆಸರಿಸಿರುವ ದೇವೇಶ್ ಮಿಶ್ರಾ ಅವರನ್ನು ಇನ್ನೂ ಬಂಧಿಸಿಲ್ಲ ಅಥವಾ ಚಾರ್ಜ್‌ಶೀಟ್ ನಲ್ಲಿ ಅವರನ್ನು ಉಲ್ಲೇಖಿಸಿಲ್ಲ. ಅವರು 1996 ರಿಂದ ಸಂಘದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಕಳೆದ ಎಂಟು ವರ್ಷಗಳಿಂದ ಆರ್‌ಎಸ್‌ಎಸ್‌ನ ಯಮುನಾ ವಿಹಾರ್ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರನ್ನು ವಿಶ್ವ ಹಿಂದೂ ಪರಿಷತ್‌ಗೆ ಸ್ಥಳಾಂತರಿಸಲಾಯಿತು ಮತ್ತು ಈಗ ಅವರ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ದೂರಿನಲ್ಲಿ ಹೆಸರಿಸಲಾದ ಇನ್ನೊಬ್ಬ ವ್ಯಕ್ತಿ ಸುಭಾಷ್ ತ್ಯಾಗಿಯನ್ನು ಸಹ ಇದುವರೆಗೆ ಬಂಧಿಸಿಲ್ಲ. ಇವರು ಕೂಡ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ಕ್ವಿಂಟ್ ವರದಿ ಓದಿ


ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...