Homeಮುಖಪುಟಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮನುವಾದಿ ಕಾರ್ಯಸೂಚಿಗೆ ಸಾರ್ವಜನಿಕ ಬೆಂಬಲವಿದೆಯೇ ಎಂದು ಪರೀಕ್ಷಿಸಲು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೇರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸವಾಲು ಹಾಕಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, ಹೊಸ ಪೌರತ್ವ ಕಾನೂನು (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಆರ್‌ಎಸ್‌ಎಸ್‌ನ “ಹಿಡನ್‌ ಅಜೆಂಡಾಗಳಾಗಿವೆ” ಎಂದು ಆರೋಪಿಸಿದ್ದಾರೆ.

“ನಾನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಸಲಹೆಯನ್ನು ನೀಡಲು ಬಯಸುತ್ತೇನೆ … ಸುಳ್ಳಿನ ಮುಸುಕನ್ನು ತೆಗೆದು ನಿಮ್ಮ ಕಾರ್ಯಸೂಚಿಯೊಂದಿಗೆ ನೇರ ಚುನಾವಣೆಗಳಲ್ಲಿ ಸ್ಪರ್ಧಿಸಿ. ಇದು ಪ್ರಜಾಪ್ರಭುತ್ವ .. ಆಗ ಈ ದೇಶ ನಡೆಯುತ್ತಿರುವುದು ನಿಮ್ಮ ಮನುಸ್ಮೃತಿಯಿಂದಲೋ  ಅಥವಾ ಸಂವಿಧಾನದಿಂದಲೋ ಎಂದು ಜನರು ತಿಳಿಸುತ್ತಾರೆ ಎಂದು ಆಜಾದ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಹೆದರಿ ಸ್ಥಳೀಯ ಪೊಲೀಸರು ಅನುಮತಿಯನ್ನು ನಿರಾಕರಿಸಿದ ನಂತರ,  ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠವು ಭೀಮ್ ಆರ್ಮಿಯು ತನ್ನ ಕಾರ್ಯಕರ್ತರ ಸಭೆಯನ್ನು ರೇಶಿಂಬಾಗ್ ಮೈದಾನದಲ್ಲಿ ನಡೆಸಲು ಅನುಮತಿ ನೀಡಿತು.

ನಾಗ್ಪುರ ಪೊಲೀಸರ ವಾದವನ್ನು ಉಲ್ಲೇಖಿಸಿದ ಆಜಾದ್, ಎರಡು ಸಿದ್ಧಾಂತಗಳು ಯಾವಾಗಲೂ ಘರ್ಷಣೆಗೆ ಒಳಗಾಗುತ್ತವೆ. ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ ಎಂದಿದ್ದಾರೆ.

ಆರ್‌ಎಸ್‌ಎಸ್ ಬಿಜೆಪಿಯನ್ನು ನಡೆಸುತ್ತಿರುವುದರಿಂದ ಪ್ರಧಾನ ಮಂತ್ರಿಗಳು ಸಂಘದ ಮುಖ್ಯಸ್ಥರನ್ನು ಭೇಟಿಯಾಗಿ ಕೈಮುಗಿದು ತಮ್ಮ ಕಾರ್ಯಕ್ರಮಗಳನ್ನು ವಿವರಿಸುತ್ತಾರೆ ಎಂದು ಅವರು ಹೇಳಿದರು.

“ಅವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಮನುಸ್ಮೃತಿಯ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಾರೆ” ಎಂದ ಅವರು, ಆರ್‌ಎಸ್‌ಎಸ್ ಹಿಂಬಾಗಿಲ ಮೂಲಕ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ಜನರು ಸರ್ಕಾರಿ ಉದ್ಯೋಗಗಳಲ್ಲಿ ಇನ್ನೂ ಪ್ರಮುಖ ಹುದ್ದೆಗಳನ್ನು ಪಡೆಯಬೇಕಿದೆ. ಒಂದು ದಿನ, ನಮ್ಮ ಪ್ರಧಾನಿ ಮತ್ತು ಇತರ ರಾಜ್ಯಗಳಲ್ಲಿ ಸರ್ಕಾರಗಳನ್ನು ನಾವು ರಚಿಸುತ್ತೇವೆ. ಆಗ ನಾವು ನಿಮಗೆ ಮೀಸಲಾತಿ ನೀಡುತ್ತೇವೆ. ಸಮಾಜದ ಇತರ ವರ್ಗಗಳಿಗೂ ಸಹ ಮೀಸಲಾತಿ ನೀಡುತ್ತೇವೆ “ನಾವು ನೀಡುವವರಾಗುತ್ತೇವೆಯೇ ಹೊರತು ತೆಗೆದುಕೊಳ್ಳುವವರಲ್ಲ” ಎಂದು ಆಜಾದ್ ಹೇಳಿದರು.

ಮೀಸಲಾತಿ ವ್ಯವಸ್ಥೆ ಕುರಿತು ಚರ್ಚೆ ನಡೆಸಲು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸವಾಲು ಕೂಡ ಹಾಕಿದ್ದಾರೆ. ಅಲ್ಲದೇ “ಜನರ ಹಿತದೃಷ್ಟಿಯಿಂದ” ರಾಜ್ಯದಲ್ಲಿ ಎನ್‌ಪಿಆರ್‌ಗೆ ಅವಕಾಶ ನೀಡದಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಆಜಾದ್ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...