Homeಮುಖಪುಟಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮನುವಾದಿ ಕಾರ್ಯಸೂಚಿಗೆ ಸಾರ್ವಜನಿಕ ಬೆಂಬಲವಿದೆಯೇ ಎಂದು ಪರೀಕ್ಷಿಸಲು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೇರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸವಾಲು ಹಾಕಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, ಹೊಸ ಪೌರತ್ವ ಕಾನೂನು (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಆರ್‌ಎಸ್‌ಎಸ್‌ನ “ಹಿಡನ್‌ ಅಜೆಂಡಾಗಳಾಗಿವೆ” ಎಂದು ಆರೋಪಿಸಿದ್ದಾರೆ.

“ನಾನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಸಲಹೆಯನ್ನು ನೀಡಲು ಬಯಸುತ್ತೇನೆ … ಸುಳ್ಳಿನ ಮುಸುಕನ್ನು ತೆಗೆದು ನಿಮ್ಮ ಕಾರ್ಯಸೂಚಿಯೊಂದಿಗೆ ನೇರ ಚುನಾವಣೆಗಳಲ್ಲಿ ಸ್ಪರ್ಧಿಸಿ. ಇದು ಪ್ರಜಾಪ್ರಭುತ್ವ .. ಆಗ ಈ ದೇಶ ನಡೆಯುತ್ತಿರುವುದು ನಿಮ್ಮ ಮನುಸ್ಮೃತಿಯಿಂದಲೋ  ಅಥವಾ ಸಂವಿಧಾನದಿಂದಲೋ ಎಂದು ಜನರು ತಿಳಿಸುತ್ತಾರೆ ಎಂದು ಆಜಾದ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಹೆದರಿ ಸ್ಥಳೀಯ ಪೊಲೀಸರು ಅನುಮತಿಯನ್ನು ನಿರಾಕರಿಸಿದ ನಂತರ,  ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠವು ಭೀಮ್ ಆರ್ಮಿಯು ತನ್ನ ಕಾರ್ಯಕರ್ತರ ಸಭೆಯನ್ನು ರೇಶಿಂಬಾಗ್ ಮೈದಾನದಲ್ಲಿ ನಡೆಸಲು ಅನುಮತಿ ನೀಡಿತು.

ನಾಗ್ಪುರ ಪೊಲೀಸರ ವಾದವನ್ನು ಉಲ್ಲೇಖಿಸಿದ ಆಜಾದ್, ಎರಡು ಸಿದ್ಧಾಂತಗಳು ಯಾವಾಗಲೂ ಘರ್ಷಣೆಗೆ ಒಳಗಾಗುತ್ತವೆ. ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ ಎಂದಿದ್ದಾರೆ.

ಆರ್‌ಎಸ್‌ಎಸ್ ಬಿಜೆಪಿಯನ್ನು ನಡೆಸುತ್ತಿರುವುದರಿಂದ ಪ್ರಧಾನ ಮಂತ್ರಿಗಳು ಸಂಘದ ಮುಖ್ಯಸ್ಥರನ್ನು ಭೇಟಿಯಾಗಿ ಕೈಮುಗಿದು ತಮ್ಮ ಕಾರ್ಯಕ್ರಮಗಳನ್ನು ವಿವರಿಸುತ್ತಾರೆ ಎಂದು ಅವರು ಹೇಳಿದರು.

“ಅವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಮನುಸ್ಮೃತಿಯ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಾರೆ” ಎಂದ ಅವರು, ಆರ್‌ಎಸ್‌ಎಸ್ ಹಿಂಬಾಗಿಲ ಮೂಲಕ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ಜನರು ಸರ್ಕಾರಿ ಉದ್ಯೋಗಗಳಲ್ಲಿ ಇನ್ನೂ ಪ್ರಮುಖ ಹುದ್ದೆಗಳನ್ನು ಪಡೆಯಬೇಕಿದೆ. ಒಂದು ದಿನ, ನಮ್ಮ ಪ್ರಧಾನಿ ಮತ್ತು ಇತರ ರಾಜ್ಯಗಳಲ್ಲಿ ಸರ್ಕಾರಗಳನ್ನು ನಾವು ರಚಿಸುತ್ತೇವೆ. ಆಗ ನಾವು ನಿಮಗೆ ಮೀಸಲಾತಿ ನೀಡುತ್ತೇವೆ. ಸಮಾಜದ ಇತರ ವರ್ಗಗಳಿಗೂ ಸಹ ಮೀಸಲಾತಿ ನೀಡುತ್ತೇವೆ “ನಾವು ನೀಡುವವರಾಗುತ್ತೇವೆಯೇ ಹೊರತು ತೆಗೆದುಕೊಳ್ಳುವವರಲ್ಲ” ಎಂದು ಆಜಾದ್ ಹೇಳಿದರು.

ಮೀಸಲಾತಿ ವ್ಯವಸ್ಥೆ ಕುರಿತು ಚರ್ಚೆ ನಡೆಸಲು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸವಾಲು ಕೂಡ ಹಾಕಿದ್ದಾರೆ. ಅಲ್ಲದೇ “ಜನರ ಹಿತದೃಷ್ಟಿಯಿಂದ” ರಾಜ್ಯದಲ್ಲಿ ಎನ್‌ಪಿಆರ್‌ಗೆ ಅವಕಾಶ ನೀಡದಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಆಜಾದ್ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...