Homeಮುಖಪುಟಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ಧೈರ್‍ಯವಿದ್ದರೆ ನೇರ ಚುನಾವಣೆ ಎದುರಿಸಿ: ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಭೀಮ್‌ ಆರ್ಮಿ ಆಜಾದ್‌ ಸವಾಲು

ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮನುವಾದಿ ಕಾರ್ಯಸೂಚಿಗೆ ಸಾರ್ವಜನಿಕ ಬೆಂಬಲವಿದೆಯೇ ಎಂದು ಪರೀಕ್ಷಿಸಲು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೇರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸವಾಲು ಹಾಕಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, ಹೊಸ ಪೌರತ್ವ ಕಾನೂನು (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಆರ್‌ಎಸ್‌ಎಸ್‌ನ “ಹಿಡನ್‌ ಅಜೆಂಡಾಗಳಾಗಿವೆ” ಎಂದು ಆರೋಪಿಸಿದ್ದಾರೆ.

“ನಾನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಸಲಹೆಯನ್ನು ನೀಡಲು ಬಯಸುತ್ತೇನೆ … ಸುಳ್ಳಿನ ಮುಸುಕನ್ನು ತೆಗೆದು ನಿಮ್ಮ ಕಾರ್ಯಸೂಚಿಯೊಂದಿಗೆ ನೇರ ಚುನಾವಣೆಗಳಲ್ಲಿ ಸ್ಪರ್ಧಿಸಿ. ಇದು ಪ್ರಜಾಪ್ರಭುತ್ವ .. ಆಗ ಈ ದೇಶ ನಡೆಯುತ್ತಿರುವುದು ನಿಮ್ಮ ಮನುಸ್ಮೃತಿಯಿಂದಲೋ  ಅಥವಾ ಸಂವಿಧಾನದಿಂದಲೋ ಎಂದು ಜನರು ತಿಳಿಸುತ್ತಾರೆ ಎಂದು ಆಜಾದ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಹೆದರಿ ಸ್ಥಳೀಯ ಪೊಲೀಸರು ಅನುಮತಿಯನ್ನು ನಿರಾಕರಿಸಿದ ನಂತರ,  ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠವು ಭೀಮ್ ಆರ್ಮಿಯು ತನ್ನ ಕಾರ್ಯಕರ್ತರ ಸಭೆಯನ್ನು ರೇಶಿಂಬಾಗ್ ಮೈದಾನದಲ್ಲಿ ನಡೆಸಲು ಅನುಮತಿ ನೀಡಿತು.

ನಾಗ್ಪುರ ಪೊಲೀಸರ ವಾದವನ್ನು ಉಲ್ಲೇಖಿಸಿದ ಆಜಾದ್, ಎರಡು ಸಿದ್ಧಾಂತಗಳು ಯಾವಾಗಲೂ ಘರ್ಷಣೆಗೆ ಒಳಗಾಗುತ್ತವೆ. ನಾವು ಸಂವಿಧಾನವನ್ನು ನಂಬುವಾಗ, ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಈ ದೇಶವು ಸಂವಿಧಾನದ ಮೇಲೆ ಮಾತ್ರ ನಡೆಯುತ್ತದೆ ಮತ್ತು ಬೇರೆ ಯಾವುದೇ ಸಿದ್ಧಾಂತದ ಮೇಲೆ ಅಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದರೆ ಮಾತ್ರ ಮನುವಾದ ಕೊನೆಗೊಳ್ಳುತ್ತದೆ ಎಂದಿದ್ದಾರೆ.

ಆರ್‌ಎಸ್‌ಎಸ್ ಬಿಜೆಪಿಯನ್ನು ನಡೆಸುತ್ತಿರುವುದರಿಂದ ಪ್ರಧಾನ ಮಂತ್ರಿಗಳು ಸಂಘದ ಮುಖ್ಯಸ್ಥರನ್ನು ಭೇಟಿಯಾಗಿ ಕೈಮುಗಿದು ತಮ್ಮ ಕಾರ್ಯಕ್ರಮಗಳನ್ನು ವಿವರಿಸುತ್ತಾರೆ ಎಂದು ಅವರು ಹೇಳಿದರು.

“ಅವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಮನುಸ್ಮೃತಿಯ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಾರೆ” ಎಂದ ಅವರು, ಆರ್‌ಎಸ್‌ಎಸ್ ಹಿಂಬಾಗಿಲ ಮೂಲಕ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ಜನರು ಸರ್ಕಾರಿ ಉದ್ಯೋಗಗಳಲ್ಲಿ ಇನ್ನೂ ಪ್ರಮುಖ ಹುದ್ದೆಗಳನ್ನು ಪಡೆಯಬೇಕಿದೆ. ಒಂದು ದಿನ, ನಮ್ಮ ಪ್ರಧಾನಿ ಮತ್ತು ಇತರ ರಾಜ್ಯಗಳಲ್ಲಿ ಸರ್ಕಾರಗಳನ್ನು ನಾವು ರಚಿಸುತ್ತೇವೆ. ಆಗ ನಾವು ನಿಮಗೆ ಮೀಸಲಾತಿ ನೀಡುತ್ತೇವೆ. ಸಮಾಜದ ಇತರ ವರ್ಗಗಳಿಗೂ ಸಹ ಮೀಸಲಾತಿ ನೀಡುತ್ತೇವೆ “ನಾವು ನೀಡುವವರಾಗುತ್ತೇವೆಯೇ ಹೊರತು ತೆಗೆದುಕೊಳ್ಳುವವರಲ್ಲ” ಎಂದು ಆಜಾದ್ ಹೇಳಿದರು.

ಮೀಸಲಾತಿ ವ್ಯವಸ್ಥೆ ಕುರಿತು ಚರ್ಚೆ ನಡೆಸಲು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸವಾಲು ಕೂಡ ಹಾಕಿದ್ದಾರೆ. ಅಲ್ಲದೇ “ಜನರ ಹಿತದೃಷ್ಟಿಯಿಂದ” ರಾಜ್ಯದಲ್ಲಿ ಎನ್‌ಪಿಆರ್‌ಗೆ ಅವಕಾಶ ನೀಡದಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಆಜಾದ್ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...