Homeಮುಖಪುಟ‘ಆರೆಸ್ಸೆಸ್ ಅಥವಾ ಸಂವಿಧಾನ’ - ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

- Advertisement -
- Advertisement -

ಬಿಹಾರದ ಪ್ರಮುಖ ಪಕ್ಷವಾದ ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ವು ಒಡೆದು ಹೋಗಿದ್ದು ಇದರ ಲಾಭವನ್ನು ರಾಜ್ಯದ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಪಡೆಯಲು ಮುಂದಾಗಿದ್ದಾರೆ. ಅವರು ಎಲ್‌ಜೆಪಿಯ ನಾಯಕ ಚಿರಾಗ್‌ ಪಾಸ್ವಾನ್‌ ಅವರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸಿದ್ದು, “ಪಾಸ್ವಾನ್‌ ಅವರ ಮುಂದೆ ಎರಡು ಆಯ್ಕೆಗಳಿವೆ, ಅವರು ಆರೆಸ್ಸೆಸ್‌ ಆಯ್ಕೆ ಮಾಡುತ್ತಾರೋ ಅಥವಾ ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವನ್ನು ಆಯ್ಕೆ ಮಾಡುತ್ತಾರೋ ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಲಾಗಿದೆ.

ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು: ಬಿಹಾರದಲ್ಲಿ ಇದು ನಿತ್ಯದ ವಿದ್ಯಮಾನ!

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷದ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಚಿರಾಗ್ ಪಾಸ್ವಾನ್ ಕೂಡಾ ಅಂದೇ ಬಿಹಾರದಲ್ಲಿ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಹಾಜಿಪುರದಿಂದ ರಾಜ್ಯವ್ಯಾಪಿ ರೋಡ್ ಶೋ ಪ್ರಾರಂಭಿಸಲು ಯೋಜಿಸಿದ್ದಾರೆ.

ತಮ್ಮ ತಂದೆಯ ನಿಧನ ನಂತರ, ನಾಯಕತ್ವಕ್ಕಾಗಿ ದಂಗೆ ಎದ್ದಿದ್ದ ಚಿರಾಗ್‌ ಅವರ ಚಿಕ್ಕಪ್ಪ ಪಶುಪತಿ ಪರಾಸ್‌ ಅವರು ಐದು ಸಂಸದರ ಬೆಂಬಲ ಪಡೆದು, ಚಿರಾಗ್‌ ಅವರನ್ನು ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಅಲ್ಲದೆ, ಎಲ್‌ಜೆಪಿಯ ನಾಯಕರಾಗಿ ಅಧಿಕಾರ ಕಸಿದುಕೊಂಡಿದ್ದಾರೆ. ಇದರಿಂದ ವಿಚಲಿತರಾಗಿದರುವ ಚಿರಾಗ್‌ ತಮ್ಮ ವರ್ಚಸ್ಸು ತೋರಿಸಲು ರಾಜ್ಯಾದ್ಯಂತ ರೋಡ್‌ ಶೋ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದಾರೆ.

ಮತ್ತೊಂದೆಡೆ, ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದಾರೆ. ಅಲ್ಲದೆ, ಪಾಸ್ವಾನ್‌ ಅವರು ಎನ್‌ಡಿಎ ಮೇಲಿನ ಏಕಪಕ್ಷೀಯ ಪ್ರೀತಿಯ ಬಗ್ಗೆ ಯೋಚಿಸಬೇಕು. ಅವರು ಯಾರೊಂದಿಗೆ ನಿಲ್ಲಲು ಬಯಸುತ್ತಾರೆ ಎದು ನಿರ್ಧರಿಸುವ ಕಾಲ ಇದಾಗಿದೆ ಎಂದೂ ತೇಜಸ್ವಿ ಯಾದವ್ ಹೇಳಿದ್ದಾರೆ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೇಜಸ್ವಿ ಯಾದವ್ ಮತ್ತು ಚಿರಾಗ್ ಪಾಸ್ವಾನ್ ಒಂದುಗೂಡಿ ಮನುವಾದಿಗಳನ್ನು ಎದುರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...