Homeಮುಖಪುಟ‘ಆರೆಸ್ಸೆಸ್ ಅಥವಾ ಸಂವಿಧಾನ’ - ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

- Advertisement -
- Advertisement -

ಬಿಹಾರದ ಪ್ರಮುಖ ಪಕ್ಷವಾದ ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ವು ಒಡೆದು ಹೋಗಿದ್ದು ಇದರ ಲಾಭವನ್ನು ರಾಜ್ಯದ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಪಡೆಯಲು ಮುಂದಾಗಿದ್ದಾರೆ. ಅವರು ಎಲ್‌ಜೆಪಿಯ ನಾಯಕ ಚಿರಾಗ್‌ ಪಾಸ್ವಾನ್‌ ಅವರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸಿದ್ದು, “ಪಾಸ್ವಾನ್‌ ಅವರ ಮುಂದೆ ಎರಡು ಆಯ್ಕೆಗಳಿವೆ, ಅವರು ಆರೆಸ್ಸೆಸ್‌ ಆಯ್ಕೆ ಮಾಡುತ್ತಾರೋ ಅಥವಾ ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವನ್ನು ಆಯ್ಕೆ ಮಾಡುತ್ತಾರೋ ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಲಾಗಿದೆ.

ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು: ಬಿಹಾರದಲ್ಲಿ ಇದು ನಿತ್ಯದ ವಿದ್ಯಮಾನ!

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷದ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಚಿರಾಗ್ ಪಾಸ್ವಾನ್ ಕೂಡಾ ಅಂದೇ ಬಿಹಾರದಲ್ಲಿ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಹಾಜಿಪುರದಿಂದ ರಾಜ್ಯವ್ಯಾಪಿ ರೋಡ್ ಶೋ ಪ್ರಾರಂಭಿಸಲು ಯೋಜಿಸಿದ್ದಾರೆ.

ತಮ್ಮ ತಂದೆಯ ನಿಧನ ನಂತರ, ನಾಯಕತ್ವಕ್ಕಾಗಿ ದಂಗೆ ಎದ್ದಿದ್ದ ಚಿರಾಗ್‌ ಅವರ ಚಿಕ್ಕಪ್ಪ ಪಶುಪತಿ ಪರಾಸ್‌ ಅವರು ಐದು ಸಂಸದರ ಬೆಂಬಲ ಪಡೆದು, ಚಿರಾಗ್‌ ಅವರನ್ನು ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಅಲ್ಲದೆ, ಎಲ್‌ಜೆಪಿಯ ನಾಯಕರಾಗಿ ಅಧಿಕಾರ ಕಸಿದುಕೊಂಡಿದ್ದಾರೆ. ಇದರಿಂದ ವಿಚಲಿತರಾಗಿದರುವ ಚಿರಾಗ್‌ ತಮ್ಮ ವರ್ಚಸ್ಸು ತೋರಿಸಲು ರಾಜ್ಯಾದ್ಯಂತ ರೋಡ್‌ ಶೋ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದಾರೆ.

ಮತ್ತೊಂದೆಡೆ, ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದಾರೆ. ಅಲ್ಲದೆ, ಪಾಸ್ವಾನ್‌ ಅವರು ಎನ್‌ಡಿಎ ಮೇಲಿನ ಏಕಪಕ್ಷೀಯ ಪ್ರೀತಿಯ ಬಗ್ಗೆ ಯೋಚಿಸಬೇಕು. ಅವರು ಯಾರೊಂದಿಗೆ ನಿಲ್ಲಲು ಬಯಸುತ್ತಾರೆ ಎದು ನಿರ್ಧರಿಸುವ ಕಾಲ ಇದಾಗಿದೆ ಎಂದೂ ತೇಜಸ್ವಿ ಯಾದವ್ ಹೇಳಿದ್ದಾರೆ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೇಜಸ್ವಿ ಯಾದವ್ ಮತ್ತು ಚಿರಾಗ್ ಪಾಸ್ವಾನ್ ಒಂದುಗೂಡಿ ಮನುವಾದಿಗಳನ್ನು ಎದುರಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...