Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ತಿಳಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ‌ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಸರ್ಕಾರಕ್ಕೆ‌ ನಿರ್ದೇಶಿಸುವಂತೆ ಕೋರಿ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಥಸಂಚಲಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ಇದೇ 28ರಂದು ಆಯೋಜಕರೊಂದಿಗೆ ಸಭೆ ನಡೆಸಬೇಕು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿತು.

ಶಾಂತಿ ಸಭೆಯನ್ನು ಎಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಶನಿವಾರ ಅರ್ಜಿದಾರರಿಗೆ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇದನ್ನು ಹೆಚ್ಚು ಎಳೆಯದಿರುವುದು ಒಳಿತು ಎಂದು ಮೌಖಿಕವಾಗಿ ತಿಳಿಸಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಕೋರ್ಟ್‌ನಲ್ಲಿ ನಡೆದ ವಾದ –ವಿವಾದ

ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ: ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಸರ್ಕಾರದ ಪರ ವಕೀಲ ಎಜಿ (ಅಡ್ವೊಕೇಟ್ ಜನರಲ್) ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಎಜಿ ಶಶಿಕಿರಣ್ ಶೆಟ್ಟಿ: ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ, ಬಾಕಿಯಿರಿಸಿದ್ದೇವೆ.

ಹೈಕೋರ್ಟ್: ಹಾಗಿದ್ದರೆ ಯಾವಾಗ ತೀರ್ಮಾನ ಕೈಗೊಳ್ಳುತ್ತೀರಿ?

ಎಜಿ ಶಶಿಕಿರಣ್ ಶೆಟ್ಟಿ: ಶಾಂತಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಎರಡು ವಾರಗಳ ಬಳಿಕ ವಿಚಾರಣೆ ನಡೆಸಬೇಕೆಂದು ಮನವಿ.

ಹೈಕೋರ್ಟ್: ನಿಮ್ಮ ಆಡಳಿತ ಸಾಮರ್ಥ್ಯ ಸಾಬೀತಿಗೆ ಇದು ಸಕಾಲ. ಎಲ್ಲರಿಗೂ ಸಮಾಧಾನಕರವಾಗುವಂತೆ ಸಮಸ್ಯೆ ಬಗೆಹರಿಸಿ

ಹೈಕೋರ್ಟ್: ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ ವರದಿಯಲ್ಲಿ ಸ್ಪಷ್ಟತೆಯಿಲ್ಲ

ಎಜಿ ಶಶಿಕಿರಣ್ ಶೆಟ್ಟಿ: 8 ಬೇರೆ ಸಂಘಟನೆಗಳೂ ಪಥಸಂಚಲನಕ್ಕೆ ಅನುಮತಿ ಕೋರಿದ್ದರೂ ಪರಿಗಣಿಸಿಲ್ಲ. ಪಥಸಂಚಲನದ ಬಗ್ಗೆ ಒಂದೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ 2 ವಾರಗಳಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ.

ಆರ್‌ಎಸ್‌ಎಸ್‌ ಪರ ವಕೀಲ: ನವೆಂಬರ್ 2ರಂದು ಪಥಸಂಚಲನಕ್ಕೆ ನಾವು ಒಪ್ಪಿದ್ದೆವು. ಈಗ ಪಥಸಂಚಲನಕ್ಕೆ ಅಡ್ಡಿ ಸೃಷ್ಟಿಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕೇಂದ್ರದ ಪಡೆ ನಿಯೋಜಿಸಲಿ. ಪಥಸಂಚಲನ ನಡೆಸುವುದು ಮೂಲಭೂತ ಹಕ್ಕಾಗಿದೆ.

ಹೈಕೋರ್ಟ್: ಶಾಂತಿ ಸಮಿತಿ ಸಭೆ ಯಾವತ್ತು ಕರೆಯುತ್ತೀರಿ? ಅ.28ರಂದು ಶಾಂತಿ ಸಭೆ ನಡೆಸಿ ಅ.30ರಂದು ವರದಿ ಸಲ್ಲಿಸಿ

ಆರ್‌ಎಸ್‌ಎಸ್‌ ಪರ ವಕೀಲ: ನಾಳೆ ಶಾಂತಿ ಸಭೆ ಕರೆಯಲು ಅನುಮತಿಸಬೇಕು.

ಎಜಿ ಶಶಿಕಿರಣ್ ಶೆಟ್ಟಿ: ಸಭೆ ಯಾವಾಗ ಕರೆಯಬೇಕೆಂದು ಅರ್ಜಿದಾರರು ಆದೇಶಿಸುವಂತಿಲ್ಲ. ಚಿತ್ತಾಪುರದಲ್ಲಿ ಪ್ರತಿದಿನ ಏನೆಲ್ಲಾ ಆಗುತ್ತಿದೆ ಎಂಬುದನ್ನು ದಿನಂಪ್ರತಿ ಮಾಧ್ಯಮಗಳಲ್ಲಿ ನೋಡುತಿದ್ದೇವೆ. ಎಲ್ಲವನ್ನೂ ಪರಿಹರಿಸಲಾಗುವುದು. ಅರ್ಜಿದಾರರು ಸಹಕಾರ ನೀಡಬೇಕು.

ಆರ್‌ಎಸ್‌ಎಸ್‌ ಪರ ವಕೀಲ: ನಾವು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದೇವೆ.

ಹೈಕೋರ್ಟ್: ಸಂಘಟನೆಗಳೊಂದಿಗೆ ಅ.28 ರಂದು ಶಾಂತಿ ಸಭೆ ನಡೆಸಬೇಕು. ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಸಭೆಯ ನಿರ್ಧಾರವನ್ನು ಅ.30 ರಂದು ತಿಳಿಸಿ

ಹೈಕೋರ್ಟ್ ಸಭೆಯ ಸಮಯವನ್ನು ಒಂದು ದಿನದಲ್ಲಿ ಅರ್ಜಿದಾರರಿಗೆ ತಿಳಿಸಿ. ವಿಚಾರವನ್ನು ಹೆಚ್ಚು ಅಲಂಬಿಸಬೇಡಿ. ಬೇಗ ಸಮಸ್ಯೆ ಬಗೆಹರಿಯುವುದು ಎಲ್ಲರಿಗೂ ಒಳ್ಳೆಯದು ಎಂದು ಹೇಳಿ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿತು.

ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...