Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ತಿಳಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ‌ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಸರ್ಕಾರಕ್ಕೆ‌ ನಿರ್ದೇಶಿಸುವಂತೆ ಕೋರಿ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಥಸಂಚಲಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ಇದೇ 28ರಂದು ಆಯೋಜಕರೊಂದಿಗೆ ಸಭೆ ನಡೆಸಬೇಕು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿತು.

ಶಾಂತಿ ಸಭೆಯನ್ನು ಎಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಶನಿವಾರ ಅರ್ಜಿದಾರರಿಗೆ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇದನ್ನು ಹೆಚ್ಚು ಎಳೆಯದಿರುವುದು ಒಳಿತು ಎಂದು ಮೌಖಿಕವಾಗಿ ತಿಳಿಸಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಕೋರ್ಟ್‌ನಲ್ಲಿ ನಡೆದ ವಾದ –ವಿವಾದ

ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ: ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಸರ್ಕಾರದ ಪರ ವಕೀಲ ಎಜಿ (ಅಡ್ವೊಕೇಟ್ ಜನರಲ್) ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಎಜಿ ಶಶಿಕಿರಣ್ ಶೆಟ್ಟಿ: ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ, ಬಾಕಿಯಿರಿಸಿದ್ದೇವೆ.

ಹೈಕೋರ್ಟ್: ಹಾಗಿದ್ದರೆ ಯಾವಾಗ ತೀರ್ಮಾನ ಕೈಗೊಳ್ಳುತ್ತೀರಿ?

ಎಜಿ ಶಶಿಕಿರಣ್ ಶೆಟ್ಟಿ: ಶಾಂತಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಎರಡು ವಾರಗಳ ಬಳಿಕ ವಿಚಾರಣೆ ನಡೆಸಬೇಕೆಂದು ಮನವಿ.

ಹೈಕೋರ್ಟ್: ನಿಮ್ಮ ಆಡಳಿತ ಸಾಮರ್ಥ್ಯ ಸಾಬೀತಿಗೆ ಇದು ಸಕಾಲ. ಎಲ್ಲರಿಗೂ ಸಮಾಧಾನಕರವಾಗುವಂತೆ ಸಮಸ್ಯೆ ಬಗೆಹರಿಸಿ

ಹೈಕೋರ್ಟ್: ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ ವರದಿಯಲ್ಲಿ ಸ್ಪಷ್ಟತೆಯಿಲ್ಲ

ಎಜಿ ಶಶಿಕಿರಣ್ ಶೆಟ್ಟಿ: 8 ಬೇರೆ ಸಂಘಟನೆಗಳೂ ಪಥಸಂಚಲನಕ್ಕೆ ಅನುಮತಿ ಕೋರಿದ್ದರೂ ಪರಿಗಣಿಸಿಲ್ಲ. ಪಥಸಂಚಲನದ ಬಗ್ಗೆ ಒಂದೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ 2 ವಾರಗಳಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ.

ಆರ್‌ಎಸ್‌ಎಸ್‌ ಪರ ವಕೀಲ: ನವೆಂಬರ್ 2ರಂದು ಪಥಸಂಚಲನಕ್ಕೆ ನಾವು ಒಪ್ಪಿದ್ದೆವು. ಈಗ ಪಥಸಂಚಲನಕ್ಕೆ ಅಡ್ಡಿ ಸೃಷ್ಟಿಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕೇಂದ್ರದ ಪಡೆ ನಿಯೋಜಿಸಲಿ. ಪಥಸಂಚಲನ ನಡೆಸುವುದು ಮೂಲಭೂತ ಹಕ್ಕಾಗಿದೆ.

ಹೈಕೋರ್ಟ್: ಶಾಂತಿ ಸಮಿತಿ ಸಭೆ ಯಾವತ್ತು ಕರೆಯುತ್ತೀರಿ? ಅ.28ರಂದು ಶಾಂತಿ ಸಭೆ ನಡೆಸಿ ಅ.30ರಂದು ವರದಿ ಸಲ್ಲಿಸಿ

ಆರ್‌ಎಸ್‌ಎಸ್‌ ಪರ ವಕೀಲ: ನಾಳೆ ಶಾಂತಿ ಸಭೆ ಕರೆಯಲು ಅನುಮತಿಸಬೇಕು.

ಎಜಿ ಶಶಿಕಿರಣ್ ಶೆಟ್ಟಿ: ಸಭೆ ಯಾವಾಗ ಕರೆಯಬೇಕೆಂದು ಅರ್ಜಿದಾರರು ಆದೇಶಿಸುವಂತಿಲ್ಲ. ಚಿತ್ತಾಪುರದಲ್ಲಿ ಪ್ರತಿದಿನ ಏನೆಲ್ಲಾ ಆಗುತ್ತಿದೆ ಎಂಬುದನ್ನು ದಿನಂಪ್ರತಿ ಮಾಧ್ಯಮಗಳಲ್ಲಿ ನೋಡುತಿದ್ದೇವೆ. ಎಲ್ಲವನ್ನೂ ಪರಿಹರಿಸಲಾಗುವುದು. ಅರ್ಜಿದಾರರು ಸಹಕಾರ ನೀಡಬೇಕು.

ಆರ್‌ಎಸ್‌ಎಸ್‌ ಪರ ವಕೀಲ: ನಾವು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದೇವೆ.

ಹೈಕೋರ್ಟ್: ಸಂಘಟನೆಗಳೊಂದಿಗೆ ಅ.28 ರಂದು ಶಾಂತಿ ಸಭೆ ನಡೆಸಬೇಕು. ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಸಭೆಯ ನಿರ್ಧಾರವನ್ನು ಅ.30 ರಂದು ತಿಳಿಸಿ

ಹೈಕೋರ್ಟ್ ಸಭೆಯ ಸಮಯವನ್ನು ಒಂದು ದಿನದಲ್ಲಿ ಅರ್ಜಿದಾರರಿಗೆ ತಿಳಿಸಿ. ವಿಚಾರವನ್ನು ಹೆಚ್ಚು ಅಲಂಬಿಸಬೇಡಿ. ಬೇಗ ಸಮಸ್ಯೆ ಬಗೆಹರಿಯುವುದು ಎಲ್ಲರಿಗೂ ಒಳ್ಳೆಯದು ಎಂದು ಹೇಳಿ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿತು.

ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...