Homeಚಳವಳಿಬಲಪಂಥೀಯ ಭಯೋತ್ಪಾದನೆಯ ಬೇರುಗಳು

ಬಲಪಂಥೀಯ ಭಯೋತ್ಪಾದನೆಯ ಬೇರುಗಳು

- Advertisement -
- Advertisement -

ನಮ್ಮ ತಂಡದ ಕ್ಯಾಪ್ಟನ್, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗಾರರ ಜಾಲವನ್ನು ಕೆದಕಿದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯ ಸಂಚಿನಲ್ಲಿ ಸೇನೆಯ ನಿವೃತ್ತ ಕರ್ನಲ್ ಒಬ್ಬನನ್ನು ಒಳಗೊಂಡು ಬಲಪಂಥೀಯ ಸಂಘಟನೆಯೊಂದರ ನಾಲ್ಕು ಟಾಪ್ ಲೀಡರ್‍ಗಳು ಭಾಗಿಯಾಗಿದ್ದಾರೆಂದು ಎಸ್‍ಐಟಿ ಮೂಲಗಳನ್ನು ಆಧರಿಸಿ ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.
ಗೌರಿಯವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ, ಈಗ ಜೈಲಿನಲ್ಲಿರುವ ಪರಶುರಾಮ ವಾಗ್ಮೋರೆ ‘ಯಾರೋ ಮಾಡಿದ ಸಂಚಿಗೆ ನಾನು ಹರಕೆಯ ಕುರಿಯಾದೆ’ ಎಂದು ತನ್ನ ತಂದೆ ತಾಯಿಯ ಬಳಿ ಪಶ್ಚಾತ್ತಾಪದ ಮಾತಾಡಿದ್ದಾನೆಂಬುದು ವರದಿಯಾಗಿತ್ತು. ಈ ಪಾತಕದ ಸಂಚು ರೂಪಿಸಿದ್ದು ಈಗ ಎಸ್‍ಐಟಿ ವಶದಲ್ಲಿರುವ ಮಹಾರಾಷ್ಟ್ರ ಮೂಲದ ಅಮೋಲ್ ಕಾಳೆ ಎಂಬ ಅಭಿಪ್ರಾಯಕ್ಕೆ ಎಸ್‍ಐಟಿ ತಲುಪಿತ್ತು. ಆದರೆ ತನಿಖೆ ಮುಂದುವರೆಯುತ್ತಿದ್ದಂತೆ ಹೊರಬಿದ್ದ ರಹಸ್ಯ ‘ಸಂಘ’ದ ಉನ್ನತ ಹಂತದ ಸಂಚುಕೋರ ನಾಯಕರ ಆದೇಶವನ್ನು ಅಮೋಲ್ ಕಾಳೆ ಜಾರಿ ಮಾಡಿದ್ದಾನೆ ಎಂಬುದು. ಈ ಕೃತ್ಯಕ್ಕೆ ಬೇಕಾದ ಹಣಕಾಸನ್ನು ಕೂಡ ಇದೇ ಸಂಘಟನೆ ಒದಗಿಸಿದೆ. ಇದಕ್ಕಾಗಿ ಅಮೋಲ್ ಕಾಳೆಗೆ ಪ್ರತಿ ತಿಂಗಳು ಕನಿಷ್ಟ 1.25 ಲಕ್ಷ ರೂಪಾಯಿ ಪಾವತಿಯಾಗಿದೆ. ಈ ಹಣ ಒದಗಿಸಿದ್ದು ಆತನ ಕಿಲ್ಲರ್ ಗ್ಯಾಂಗ್‍ನ ನಿರ್ವಹಣೆಗಾಗಿ ಎಂದು ವರದಿ ಹೇಳಿದೆ.
ಆ ನಾಲ್ಕು ಉನ್ನತ ಹಂತದ ನಾಯಕರೇ ಗೌರಿ ಕೊಲೆ ಮಾಡಲು ಆದೇಶ ಹೊರಡಿಸಿದ್ದು ಎಂಬ ಸುಳಿವು ಎಸ್‍ಐಟಿಗೆ ಸಿಕ್ಕಿದೆಯಾದರೂ ಖಚಿತ ಸಾಕ್ಷ್ಯಾಧಾರಗಳು ಸದ್ಯ ಲಭ್ಯವಿಲ್ಲದ ಕಾರಣ ತನಿಖೆ ಮುಂದುವರೆದಿದೆ. ಮಾತ್ರವಲ್ಲ, ನಾಪತ್ತೆಯಾಗಿರುವ ಇತರೆ ಆರೋಪಿಗಳನ್ನು ಶತಾಯಗತಾಯ ರಕ್ಷಣೆಮಾಡಲು ಅದೇ ಸಂಘಟನೆ ಶ್ರಮಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬಿದ್ದಿದೆ. ಹಲವು ಪ್ರತಿಕೂಲ ಅಂಶಗಳ ಹೊರತಾಗಿಯೂ ಎಸ್‍ಐಟಿ ತನಿಖೆ ಸರಿದಿಕ್ಕಿನಲ್ಲಿದೆ ಎಂದು ಭಾವಿಸೋಣ.
ಅತ್ತ ಮಹಾರಾಷ್ಟ್ರದಲ್ಲಿ, ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆಗಳ ಕೇಸಿನ ವಿಚಾರಣೆಯಲ್ಲೂ ಕೂಡ ನ್ಯಾಯ ದೊರಕಬಹುದೆ ಎಂಬ ಆಶಾಭಾವ ಚಿಗುರುವಂತಹ ಬೆಳವಣಿಗೆಗಳು ನಡೆದಿವೆ. 2013ರ ಆಗಸ್ಟ್‍ನಲ್ಲಿ ಕೊಲೆಯಾದ ನರೇಂದ್ರ ದಾಬೋಲ್ಕರ್ ಅವರ ಕೇಸಿನ ತನಿಖೆಯನ್ನು ಹಾಲಿ ಸಿಬಿಐ ನಡೆಸುತ್ತಿದೆ. 2015ರ ಫೆಬ್ರವರಿಯಲ್ಲಿ ಕೊಲೆಯಾದ ಗೋವಿಂದ್ ಪನ್ಸಾರೆ ಕೇಸಿನ ತನಿಖೆ ಅಡಿಷನಲ್ ಎಸ್‍ಪಿ ನೇತೃತ್ವದ ತಂಡದ ಉಸ್ತುವಾರಿಯಲ್ಲಿದೆ. ಆದರೆ ನಡೆದದ್ದೇನು? ಈ ಕೇಸುಗಳ ತನಿಖೆಯಲ್ಲಿ ಯಾವುದೇ ಮಹತ್ವದ ಸುಳಿವು ಲಭ್ಯವಿಲ್ಲದೆ ತಾವು ‘ಡೆಡ್ ಎಂಡ್’ ತಲುಪಿದ್ದೇವೆ ಎಂಬುದು ಈ ಘನತೆವೆತ್ತ ತನಿಖಾ ಸಂಸ್ಥೆಗಳ ವಾದ. ಈ ಹಿನ್ನೆಲೆಯಲ್ಲಿ ದಾಬೋಲ್ಕರ್ ಹಾಗೂ ಪನ್ಸಾರೆ ಕುಟುಂಬದವರು ‘ಈ ಎಲ್ಲ ಕೊಲೆ ಕೇಸುಗಳಲ್ಲಿ ಸಾಮ್ಯತೆಯಿದ್ದು, ಒಂದೇ ಪಾತಕ ಗುಂಪಿನ ಕೈವಾಡವಿರುವುದರಿಂದ ಸೂಕ್ತ ಸಮನ್ವಯದಿಂದ ತನಿಖೆ ಮುಂದುವರೆಸಲು ಒಂದು ವಿಶೇಷ ತಂಡಕ್ಕೆ ಈ ಕೇಸುಗಳನ್ನು ವಹಿಸಿಕೊಡಬೇಕೆಂದು’ ಕೋರಿ ಕೋರ್ಟ್‍ಗೆ ಅಫಿಡೇವಿಟ್ ಸಲ್ಲಿಸಿದ್ದರು.
ಕಳೆದ ವಾರ ವಿಚಾರಣೆ ನಡೆಸುತ್ತಿದ್ದ ಬಾಂಬೆ ಹೈಕೋರ್ಟ್‍ನ ನ್ಯಾ.ಸತ್ಯರಂಜನ್ ಧರ್ಮಾಧಿಕಾರಿ ಮತ್ತು ನ್ಯಾ.ಭಾರತಿ ಡಾಂಗ್ರೆ ಅವರ ಪೀಠವು ‘ಈ ಕೇಸುಗಳ ತನಿಖೆ ಪ್ರಾಮಾಣಿಕವಾಗಿ ನಡೆದಿಲ್ಲ’, ‘ತನಿಖಾ ಸಂಸ್ಥೆಗಳಿಗೆ ಗಂಭೀರತೆಯ ಕೊರತೆಯಿದೆ’ ಎಂದು ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ. ‘ಕರ್ನಾಟಕ ಪೊಲೀಸರನ್ನು ನೋಡಿ ಅವರ ಕಾರ್ಯದಕ್ಷತೆ ಮತ್ತು ಗಂಭೀರತೆಗಳನ್ನು ಕಲಿತುಕೊಳ್ಳಿ’ ಎಂದು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಸಿಐಡಿ ಸಂಸ್ಥೆಗಳಿಗೆ ಕೋರ್ಟ್ ಛೀಮಾರಿ ಹಾಕಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಸಿಬಿಐಗಳಿಗೆ ನೋಟೀಸ್ ಜಾರಿಮಾಡಿ ಸಿಬಿಐನ ಜಂಟಿ ನಿರ್ದೇಶಕರು ಹಾಗೂ ಮಹಾರಾಷ್ಟ್ರ ಗೃಹ ಇಲಾಖೆಯ ಕಾರ್ಯದರ್ಶಿಗಳು ಇದೇ ಜುಲೈ 12ಕ್ಕೆ ಖುದ್ದಾಗಿ ಕೋರ್ಟ್‍ಗೆ ಹಾಜರಾಗಿ ಈ ಕೇಸುಗಳ ತನಿಖೆಗೆ ಸಂಬಂಧಿಸಿದ ವಿವರಣೆ ನೀಡಬೇಕೆಂದು ಆದೇಶಿಸಿದೆ.
ಕರ್ನಾಟಕ ಪೊಲೀಸರು ಗೌರಿ ಲಂಕೇಶ್ ಹಂತಕರನ್ನು ಮಹಾರಾಷ್ಟ್ರದಲ್ಲಿ ಬಂಧಿಸುವುದು ಸಾಧ್ಯವಿರುವುದಾದರೆ ಮಹಾರಾಷ್ಟ್ರ ಪೊಲೀಸರು ಏನು ಮಾಡುತ್ತಿದ್ದಾರೆ ಎಂಬ ಅಸಲಿ ಪ್ರಶ್ನೆ ನ್ಯಾಯಾಧೀಶರದು. ಪನ್ಸಾರೆ ಮತ್ತು ಕರ್ನಾಟಕದ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಲು ಒಂದೇ ಪಿಸ್ತೂಲು ಬಳಸಲಾಗಿದೆಯೆಂದು, ಫೊರೆನ್ಸಿಕ್ ವರದಿಗಳನ್ನು ಆಧರಿಸಿ ಸಿಬಿಐ ಮತ್ತು ಸಿಐಡಿ ತಂಡಗಳು ಈ ಹಿಂದೆ ಕೋರ್ಟಿಗೆ ತಿಳಿಸಿದ್ದವು. ಆದರೆ ಅಲ್ಲಿಂದ ಒಂದು ಹೆಜ್ಜೆಯೂ ಮುಂದೆ ಸಾಗಿಲ್ಲ. ಇನ್ನುಮುಂದೆ ತನಿಖೆ ಎತ್ತ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೆ.
ಆದರೆ ಈ ತನಿಖೆಗಳ ಮೇಲೆ ನಾವು ಎಷ್ಟು ವಿಶ್ವಾಸ ಇಡಬಹುದು? ನೂರಾರು ಜನರ ಸಾವಿಗೆ ಕಾರಣವಾಗಿದ್ದ ಘೋರ ಪಾತಕ ಕೃತ್ಯಗಳ ತನಿಖೆಗಳನ್ನು ಹಳ್ಳಹಿಡಿಸಿ, ಸಾಕಷ್ಟು ಸಾಕ್ಷ್ಯಗಳ ಸಮೇತ ಸಿಕ್ಕಿಬಿದ್ದಿದ್ದ ಆರೋಪಿಗಳಿಗೆ ಸಾಲುಸಾಲಾಗಿ ಕ್ಲೀನ್ ಚಿಟ್ ಕೊಡುತ್ತಿರುವ ವಿದ್ಯಮಾನ ನಮ್ಮ ಕಣ್ಣೆದುರಿನಲ್ಲೇ ನಡೆಯುತ್ತಿದೆ. 2006ರಲ್ಲಿ ಮಾಳೆಗಾಂವ್‍ನಲ್ಲಿ ನಡೆದ ಬಾಂಬ್ ಸ್ಫೋಟ, 2007ರಲ್ಲಿ ಹೈದರಾಬಾದ್‍ನ ಮೆಕ್ಕಾ ಮಸೀದಿಯಲ್ಲಿ ನಡೆದ ಬಾಂಬ್ ಸ್ಫೋಟ, ಸಂಜೋತಾ ರೈಲಿನಲ್ಲಿ ಆದ ಬಾಂಬ್ ಸ್ಫೋಟ, ಅಜ್ಮೇರ್‍ನ ಪ್ರಸಿದ್ಧ ದರ್ಗಾದಲ್ಲಿ ನಡೆದ ಬಾಂಬ್ ಸ್ಫೋಟ ಮುಂತಾದ ಕೇಸುಗಳಲ್ಲಿ ಸಾಕ್ಷಿಪುರಾವೆಗಳ ಸಮೇತ ಸಿಕ್ಕಿಬಿದ್ದಿದ್ದ ಆರೋಪಿಗಳಿಗೆ ಈ ನಾಲ್ಕು ವರ್ಷಗಳಲ್ಲಿ ಕ್ಲೀನ್ ಚಿಟ್ ಭಾಗ್ಯ ಲಭಿಸಿದೆ.
ಕರ್ನಲ್ ಪುರೋಹಿತ್ ಎಂಬ ಸೇನಾಧಿಕಾರಿ ಈ ಸ್ಫೋಟಗಳಿಗೆ ಸೇನಾ ಉಗ್ರಾಣದಿಂದಲೇ ಆರ್‍ಡಿಎಕ್ಸ್ ಕದ್ದು ಸಾಗಿಸಿದ್ದ ಆರೋಪ ಹೊತ್ತು ಕಳೆದ 9 ವರ್ಷಗಳಲ್ಲಿ ಜೈಲಿನಲ್ಲಿದ್ದ. 2017ರ ಆಗಸ್ಟ್‍ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಸ್ವಾಮಿ ಅಸೀಮಾನಂದ ಎಂಬ ಕಟ್ಟರ್ ಆರೆಸ್ಸೆಸ್ ಪ್ರಚಾರಕನ ಕೇಸು ಬಹಳ ಕುತೂಹಲಕಾರಿಯಾಗಿದೆ. ಈತ ಮೇಲಿನ ನಾಲ್ಕೂ ಸ್ಫೋಟಗಳಲ್ಲಿ ಸ್ವತಃ ಭಾಗಿಯಾಗಿದ್ದಾಗಿ ಕೋರ್ಟ್ ಮುಂದೆ ಸ್ವಯಂಪ್ರೇರಿತ ಹೇಳಿಕೆ ಕೊಟ್ಟಿದ್ದ. ಈ ಹೇಳಿಕೆಯಿಂದ ನನಗೆ ಮರಣದಂಡನೆಯಾಗಬಹುದೆಂಬುದು ತನಗೆ ತಿಳಿದಿದೆ, ಆದರೆ ನಾನು ಮಾಡಿದ ತಪ್ಪಿಗೆ ಅಮಾಯಕರು ಶಿಕ್ಷೆ ಅನುಭವಿಸುವಂತಾಗಬಾರದೆಂದು ಆತ ಹೇಳಿಕೆ ನೀಡಿದ್ದ. ಈ ಹೇಳಿಕೆಗೆ ಸಿನಿಮೀಯ ರೀತಿಯ ಹಿನ್ನೆಲೆಯೊಂದಿತ್ತು. ಈಗಾಗಲೇ ಮಾಳೆಗಾಂವ್ ಕೇಸಿನಲ್ಲಿ ಜೈಲು ಸೇರಿದ್ದ ಅಸೀಮಾನಂದರಿಗೆ ಅದೇ ಜೈಲಿನಲ್ಲಿದ್ದ 21ರ ಹರೆಯದ ಕಲೀಮ್ ಎಂಬ ಮುಸ್ಲಿಂ ಯುವಕ ಬಹಳ ಆಪ್ತನಾದ. ಕಾರಣ ವಯೋವೃದ್ಧನಾಗಿದ್ದ ಅಸೀಮಾನಂದ ಜೈಲಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದಾಗ ಕಲೀಂ ರಾತ್ರಿ ಹಗಲು ಈ ವೃದ್ದರ ಸೇವೆ ಮಾಡಿದ್ದ. ಆ ಕಲೀಂನನ್ನು ಮೆಕ್ಕಾ ಮಸೀದಿ ಬಾಂಬ್ ಸ್ಫೋಟದ ಕೇಸಿನಲ್ಲಿ ಬಂಧಿಸಲಾಗಿದೆ ಎಂಬ ವಿಷಯ ತಿಳಿದಾಗ ಅಸೀಮಾನಂದ ತೀವ್ರ ವ್ಯಾಕುಲತೆಗೆ ಗುರಿಯಾದ. ವಾಸ್ತವದಲ್ಲಿ ಆ ಸ್ಫೋಟ ನಡೆಸಿದ್ದವರು ಅಸೀಮಾನಂದದ ತಂಡದವರೇ ಆಗಿದ್ದರು. ಬಾಳಿಬದುಕಬೇಕಿದ್ದ ಅಮಾಯಕ ಕಲೀಂ ಅದೇ ಕೇಸಿನಲ್ಲಿ ಜೈಲು ಪಾಲಾಗಿದ್ದ. ಅಸೀಮಾನಂದನಲ್ಲಿದ್ದ ಧರ್ಮಾಂಧತೆ ಕರಗಿ ಮನುಷ್ಯ ಗುಣ ಮೇಲುಗೈ ಸಾಧಿಸಿತ್ತು. ನ್ಯಾಯಾಧೀಶರ ಮುಂದೆ ಸುಧೀರ್ಘ ಐದು ತಾಸುಗಳ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ.
ಕೆಲವು ದಿನಗಳ ನಂತರ ಸಿಬಿಐಗೆ ಈ ಬಗ್ಗೆ ಪತ್ರ ಕೂಡ ಬರೆದಿದ್ದ. ಈ ಕೃತ್ಯಗಳಲ್ಲಿ ಆರೆಸ್ಸೆಸ್‍ನ ಕೈವಾಡ ಇದ್ದುದಾಗಿಯೂ, ಆರೆಸ್ಸೆಸ್ ನಾಯಕ ಮೋಹನ್ ಭಾಗವತ್‍ನ ಸೂಚನೆಯಿತ್ತೆಂದೂ ಆತ ತಿಳಿಸಿದ್ದ ವರದಿಗಳು ಪ್ರಕಟವಾಗಿದ್ದವು. ನಂತರದ ದಿನಗಳಲ್ಲಿ ದೊಡ್ಡ ದೊಡ್ಡ ನಾಯಕರು ಅಸೀಮಾನಂದರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೆಲವು ತಿಂಗಳುಗಳ ನಂತರ ಆತ ಒತ್ತಡದಲ್ಲಿ ಹೇಳಿಕೆ ನೀಡಿದ್ದಾಗಿ ವಿಷಯವನ್ನು ತಿರುಚಲಾಯಿತು.
2017ರ ಮಾರ್ಚ್‍ನಲ್ಲಿ ಅಸೀಮಾನಂದನ ಬಿಡುಗಡೆಯಾಗಿದೆ. ಗುಜರಾತ್ ನರಮೇಧದ ಆರೋಪಿ ಸಚಿವೆ ಮಾಯಾ ಕೊಡ್ನಾನಿಗೆ ಈ ವರ್ಷದ ಏಪ್ರಿಲ್‍ನಲ್ಲಿ ಬಿಡುಗಡೆಯ ಭಾಗ್ಯ ಲಭಿಸಿದೆ. ಈ ಎಲ್ಲ ಸ್ಫೋಟಗಳಲ್ಲಿ ಭಾಗಿಯಾಗಿದ್ದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೊರಬಂದಿದ್ದಾಳೆ. ನಕಲಿ ಎನ್‍ಕೌಂಟರ್ ಕೇಸಿನಲ್ಲಿ ಅಮಿತ್ ಶಾ ಖುಲಾಸೆಯಾಗಿದ್ದಾನೆ. ಜಸ್ಟೀಸ್ ಲೋಯಾ ಕೇಸು ವಿಚಾರಣೆಯೂ ಇಲ್ಲದೆ ಮೂಲೆ ಸೇರಿದೆ. ಹೀಗೆ ಬರೆಯುತ್ತಾ ಹೋದರೆ…
ಈ ಎಲ್ಲ ಪಾತಕಗಳು ತಾರ್ಕಿಕ ಅಂತ್ಯ ತಲುಪಬೇಕೆಂದರೆ ಕನಿಷ್ಟ ಕರ್ನಾಟಕದ ಎಸ್‍ಐಟಿ ಮಾದರಿಯ ತನಿಖೆಯಾದರೂ ನಡೆಯಬೇಕು. ತೆರೆಯ ಹಿಂದಿನ ಪಾತಕಿಗಳಿಗೆ ಹೆಡೆಮುರಿ ಕಟ್ಟಬೇಕು. ಆದರೆ…?

– ಸಂಪಾದಕ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...