Homeಮುಖಪುಟಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್‌ಎಸ್‌ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ವೆಬ್‌ಸೈಟ್‌ನಲ್ಲಿ ಡಿಲೀಟ್ ಮಾಡಿದ ಲೇಖನವನ್ನು ಅವರು ಉಲ್ಲೇಖಿಸಿದ್ದಾರೆ.

ಏಪ್ರಿಲ್ 3 ರಂದು ಪ್ರಕಟವಾದ ‘ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ದಿ ಕ್ಯಾಥೋಲಿಕ್ ಚರ್ಚ್ v/s ವಕ್ಫ್ ಬೋರ್ಡ್ ಡಿಬೇಟ್’ ಎಂಬ ಲೇಖನವು, “ದೇಶದಲ್ಲಿ ಭೂ ಮಾಲೀಕತ್ವದ ನಿಜವಾದ ದತ್ತಾಂಶವು ಕ್ಯಾಥೋಲಿಕ್ ಚರ್ಚ್ ವಕ್ಫ್ ಮಂಡಳಿಗಿಂತ ಅತಿದೊಡ್ಡ ಸರ್ಕಾರೇತರ ಭೂಮಾಲೀಕ” ಎಂದು ಲೇಖನದಲ್ಲಿ ಹೇಳಿಲಾಗಿದೆ.

ಲೇಖನವನ್ನು ಆಧರಿಸಿದ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ರಾಹುಲ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. “ವಕ್ಫ್ ಮಸೂದೆ ಈಗ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ. ಆರ್‌ಎಸ್‌ಎಸ್ ಕ್ರಿಶ್ಚಿಯನ್ನರ ಕಡೆಗೆ ಗಮನ ಹರಿಸಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಇಂತಹ ದಾಳಿಗಳಿಂದ ನಮ್ಮ ಜನರನ್ನು ರಕ್ಷಿಸುವ ಏಕೈಕ ಗುರಾಣಿ ಸಂವಿಧಾನ; ಅದನ್ನು ರಕ್ಷಿಸುವುದು ನಮ್ಮ ಸಾಮೂಹಿಕ ಕರ್ತವ್ಯ” ಎಂದು ಅವರು ಹೇಳಿದರು.

ಮಸೂದೆಗೆ ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ (ಸಿಬಿಸಿಐ) ಮತ್ತು ಕೇರಳ ಕ್ಯಾಥೋಲಿಕ್ ಬಿಷಪ್‌ಗಳ ಮಂಡಳಿ (ಕೆಸಿಬಿಸಿ) ಬೆಂಬಲ ನೀಡುತ್ತಿರುವುದನ್ನು ಮತ್ತು ಪರವಾಗಿ ಮತ ಚಲಾಯಿಸುವಂತೆ ಸಂಸದರಿಗೆ ಮನವಿ ಮಾಡಿರುವುದನ್ನು ಬಿಜೆಪಿ ಉಲ್ಲೇಖಿಸುತ್ತಿರುವ ಸಮಯದಲ್ಲಿ ಈ ಲೇಖನ ಬಂದಿದೆ. ವಕ್ಫ್ ಮಂಡಳಿಯು ತಮ್ಮ ಭೂಮಿಯ ಮೇಲೆ ಹಕ್ಕು ಸಾಧಿಸಿದ ನಂತರ ಸ್ಥಳಾಂತರದ ಭೀತಿ ಎದುರಿಸುತ್ತಿರುವ ಕೇರಳದ ಮುನಂಬಮ್‌ನಲ್ಲಿರುವ ಕ್ರಿಶ್ಚಿಯನ್ ಕುಟುಂಬಗಳ ಪ್ರತಿಭಟನೆಯ ನಂತರ ಈ ಮನವಿ ಬಂದಿದೆ.

‘ಆರ್ಗನೈಸರ್’ ಲೇಖನದ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಮತ್ತು ಅದರ ಸಂಸ್ಥೆಗಳು ಸುಮಾರು ಏಳು ಕೋಟಿ ಹೆಕ್ಟೇರ್ ಭೂಮಿಯನ್ನು ಹೊಂದಿದ್ದು, ಇದು ಸುಮಾರು 20,000 ಕೋಟಿ ರೂ.ಗಳ ಅಂದಾಜು ಭೂಮಿಯನ್ನು ಹೊಂದಿದೆ.

“ಸರ್ಕಾರಿ ಭೂ ಮಾಹಿತಿ ವೆಬ್‌ಸೈಟ್ ಪ್ರಕಾರ, ಫೆಬ್ರವರಿ 2021 ರ ಹೊತ್ತಿಗೆ, ಭಾರತ ಸರ್ಕಾರವು ಸುಮಾರು 15,531 ಚದರ ಕಿಲೋಮೀಟರ್ ಭೂಮಿಯನ್ನು ಹೊಂದಿತ್ತು… ವಕ್ಫ್ ಮಂಡಳಿಯು ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಭೂಭಾಗಗಳನ್ನು ಹೊಂದಿದ್ದರೂ, ಅದು ಭಾರತದಲ್ಲಿ ಕ್ಯಾಥೋಲಿಕ್ ಚರ್ಚ್‌ನ ಹಿಡುವಳಿಗಳನ್ನು ಮೀರಿಸುವುದಿಲ್ಲ” ಎಂದು ಅದು ಹೇಳಿಕೊಂಡಿದೆ.

2012 ರ ಹೊತ್ತಿಗೆ, ಕ್ಯಾಥೋಲಿಕ್ ಚರ್ಚ್ 2,457 ಆಸ್ಪತ್ರೆ ಔಷಧಾಲಯಗಳು, 240 ವೈದ್ಯಕೀಯ ಅಥವಾ ನರ್ಸಿಂಗ್ ಕಾಲೇಜುಗಳು, 28 ಸಾಮಾನ್ಯ ಕಾಲೇಜುಗಳು, 5 ಎಂಜಿನಿಯರಿಂಗ್ ಕಾಲೇಜುಗಳು, 3,765 ಮಾಧ್ಯಮಿಕ ಶಾಲೆಗಳು, 7,319 ಪ್ರಾಥಮಿಕ ಶಾಲೆಗಳು ಮತ್ತು 3,187 ನರ್ಸರಿ ಶಾಲೆಗಳನ್ನು ಹೊಂದಿತ್ತು ಎಂದು ಲೇಖನ ಹೇಳಿದೆ.

“ಅದರ ಹೆಚ್ಚಿನ ಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಯಿತು. 1927 ರಲ್ಲಿ, ಬ್ರಿಟಿಷ್ ಆಡಳಿತವು ಭಾರತೀಯ ಚರ್ಚ್ ಕಾಯ್ದೆಯನ್ನು ಅಂಗೀಕರಿಸಿತು, ಇದು ಚರ್ಚ್‌ಗೆ ದೊಡ್ಡ ಪ್ರಮಾಣದ ಭೂ ಅನುದಾನವನ್ನು ಸುಗಮಗೊಳಿಸಿತು” ಎಂದು ಅದು ಹೇಳಿದೆ.

“1965 ರಲ್ಲಿ, ಭಾರತ ಸರ್ಕಾರವು ಬ್ರಿಟಿಷ್ ಸರ್ಕಾರದಿಂದ ಗುತ್ತಿಗೆಗೆ ನೀಡಲಾದ ಯಾವುದೇ ಭೂಮಿಯನ್ನು ಇನ್ನು ಮುಂದೆ ಚರ್ಚ್ ಆಸ್ತಿ ಎಂದು ಗುರುತಿಸಲಾಗುವುದಿಲ್ಲ ಎಂದು ಹೇಳುವ ಸುತ್ತೋಲೆಯನ್ನು ಹೊರಡಿಸಿತು. ಆದರೂ, ಈ ನಿರ್ದೇಶನದ ಸಡಿಲ ಜಾರಿಯಿಂದಾಗಿ, ಕೆಲವು ಚರ್ಚ್ ಒಡೆತನದ ಭೂಮಿಗಳ ಕಾನೂನುಬದ್ಧತೆ ಬಗೆಹರಿಯದೆ ಉಳಿದಿದೆ” ಎಂದು ಅದು ಹೇಳಿದೆ.

ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...