Homeಮುಖಪುಟಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್‌ಎಸ್‌ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ವೆಬ್‌ಸೈಟ್‌ನಲ್ಲಿ ಡಿಲೀಟ್ ಮಾಡಿದ ಲೇಖನವನ್ನು ಅವರು ಉಲ್ಲೇಖಿಸಿದ್ದಾರೆ.

ಏಪ್ರಿಲ್ 3 ರಂದು ಪ್ರಕಟವಾದ ‘ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ದಿ ಕ್ಯಾಥೋಲಿಕ್ ಚರ್ಚ್ v/s ವಕ್ಫ್ ಬೋರ್ಡ್ ಡಿಬೇಟ್’ ಎಂಬ ಲೇಖನವು, “ದೇಶದಲ್ಲಿ ಭೂ ಮಾಲೀಕತ್ವದ ನಿಜವಾದ ದತ್ತಾಂಶವು ಕ್ಯಾಥೋಲಿಕ್ ಚರ್ಚ್ ವಕ್ಫ್ ಮಂಡಳಿಗಿಂತ ಅತಿದೊಡ್ಡ ಸರ್ಕಾರೇತರ ಭೂಮಾಲೀಕ” ಎಂದು ಲೇಖನದಲ್ಲಿ ಹೇಳಿಲಾಗಿದೆ.

ಲೇಖನವನ್ನು ಆಧರಿಸಿದ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ರಾಹುಲ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. “ವಕ್ಫ್ ಮಸೂದೆ ಈಗ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ. ಆರ್‌ಎಸ್‌ಎಸ್ ಕ್ರಿಶ್ಚಿಯನ್ನರ ಕಡೆಗೆ ಗಮನ ಹರಿಸಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಇಂತಹ ದಾಳಿಗಳಿಂದ ನಮ್ಮ ಜನರನ್ನು ರಕ್ಷಿಸುವ ಏಕೈಕ ಗುರಾಣಿ ಸಂವಿಧಾನ; ಅದನ್ನು ರಕ್ಷಿಸುವುದು ನಮ್ಮ ಸಾಮೂಹಿಕ ಕರ್ತವ್ಯ” ಎಂದು ಅವರು ಹೇಳಿದರು.

ಮಸೂದೆಗೆ ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ (ಸಿಬಿಸಿಐ) ಮತ್ತು ಕೇರಳ ಕ್ಯಾಥೋಲಿಕ್ ಬಿಷಪ್‌ಗಳ ಮಂಡಳಿ (ಕೆಸಿಬಿಸಿ) ಬೆಂಬಲ ನೀಡುತ್ತಿರುವುದನ್ನು ಮತ್ತು ಪರವಾಗಿ ಮತ ಚಲಾಯಿಸುವಂತೆ ಸಂಸದರಿಗೆ ಮನವಿ ಮಾಡಿರುವುದನ್ನು ಬಿಜೆಪಿ ಉಲ್ಲೇಖಿಸುತ್ತಿರುವ ಸಮಯದಲ್ಲಿ ಈ ಲೇಖನ ಬಂದಿದೆ. ವಕ್ಫ್ ಮಂಡಳಿಯು ತಮ್ಮ ಭೂಮಿಯ ಮೇಲೆ ಹಕ್ಕು ಸಾಧಿಸಿದ ನಂತರ ಸ್ಥಳಾಂತರದ ಭೀತಿ ಎದುರಿಸುತ್ತಿರುವ ಕೇರಳದ ಮುನಂಬಮ್‌ನಲ್ಲಿರುವ ಕ್ರಿಶ್ಚಿಯನ್ ಕುಟುಂಬಗಳ ಪ್ರತಿಭಟನೆಯ ನಂತರ ಈ ಮನವಿ ಬಂದಿದೆ.

‘ಆರ್ಗನೈಸರ್’ ಲೇಖನದ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಮತ್ತು ಅದರ ಸಂಸ್ಥೆಗಳು ಸುಮಾರು ಏಳು ಕೋಟಿ ಹೆಕ್ಟೇರ್ ಭೂಮಿಯನ್ನು ಹೊಂದಿದ್ದು, ಇದು ಸುಮಾರು 20,000 ಕೋಟಿ ರೂ.ಗಳ ಅಂದಾಜು ಭೂಮಿಯನ್ನು ಹೊಂದಿದೆ.

“ಸರ್ಕಾರಿ ಭೂ ಮಾಹಿತಿ ವೆಬ್‌ಸೈಟ್ ಪ್ರಕಾರ, ಫೆಬ್ರವರಿ 2021 ರ ಹೊತ್ತಿಗೆ, ಭಾರತ ಸರ್ಕಾರವು ಸುಮಾರು 15,531 ಚದರ ಕಿಲೋಮೀಟರ್ ಭೂಮಿಯನ್ನು ಹೊಂದಿತ್ತು… ವಕ್ಫ್ ಮಂಡಳಿಯು ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಭೂಭಾಗಗಳನ್ನು ಹೊಂದಿದ್ದರೂ, ಅದು ಭಾರತದಲ್ಲಿ ಕ್ಯಾಥೋಲಿಕ್ ಚರ್ಚ್‌ನ ಹಿಡುವಳಿಗಳನ್ನು ಮೀರಿಸುವುದಿಲ್ಲ” ಎಂದು ಅದು ಹೇಳಿಕೊಂಡಿದೆ.

2012 ರ ಹೊತ್ತಿಗೆ, ಕ್ಯಾಥೋಲಿಕ್ ಚರ್ಚ್ 2,457 ಆಸ್ಪತ್ರೆ ಔಷಧಾಲಯಗಳು, 240 ವೈದ್ಯಕೀಯ ಅಥವಾ ನರ್ಸಿಂಗ್ ಕಾಲೇಜುಗಳು, 28 ಸಾಮಾನ್ಯ ಕಾಲೇಜುಗಳು, 5 ಎಂಜಿನಿಯರಿಂಗ್ ಕಾಲೇಜುಗಳು, 3,765 ಮಾಧ್ಯಮಿಕ ಶಾಲೆಗಳು, 7,319 ಪ್ರಾಥಮಿಕ ಶಾಲೆಗಳು ಮತ್ತು 3,187 ನರ್ಸರಿ ಶಾಲೆಗಳನ್ನು ಹೊಂದಿತ್ತು ಎಂದು ಲೇಖನ ಹೇಳಿದೆ.

“ಅದರ ಹೆಚ್ಚಿನ ಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಯಿತು. 1927 ರಲ್ಲಿ, ಬ್ರಿಟಿಷ್ ಆಡಳಿತವು ಭಾರತೀಯ ಚರ್ಚ್ ಕಾಯ್ದೆಯನ್ನು ಅಂಗೀಕರಿಸಿತು, ಇದು ಚರ್ಚ್‌ಗೆ ದೊಡ್ಡ ಪ್ರಮಾಣದ ಭೂ ಅನುದಾನವನ್ನು ಸುಗಮಗೊಳಿಸಿತು” ಎಂದು ಅದು ಹೇಳಿದೆ.

“1965 ರಲ್ಲಿ, ಭಾರತ ಸರ್ಕಾರವು ಬ್ರಿಟಿಷ್ ಸರ್ಕಾರದಿಂದ ಗುತ್ತಿಗೆಗೆ ನೀಡಲಾದ ಯಾವುದೇ ಭೂಮಿಯನ್ನು ಇನ್ನು ಮುಂದೆ ಚರ್ಚ್ ಆಸ್ತಿ ಎಂದು ಗುರುತಿಸಲಾಗುವುದಿಲ್ಲ ಎಂದು ಹೇಳುವ ಸುತ್ತೋಲೆಯನ್ನು ಹೊರಡಿಸಿತು. ಆದರೂ, ಈ ನಿರ್ದೇಶನದ ಸಡಿಲ ಜಾರಿಯಿಂದಾಗಿ, ಕೆಲವು ಚರ್ಚ್ ಒಡೆತನದ ಭೂಮಿಗಳ ಕಾನೂನುಬದ್ಧತೆ ಬಗೆಹರಿಯದೆ ಉಳಿದಿದೆ” ಎಂದು ಅದು ಹೇಳಿದೆ.

ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...