Homeಮುಖಪುಟಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್‌ಎಸ್‌ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ವೆಬ್‌ಸೈಟ್‌ನಲ್ಲಿ ಡಿಲೀಟ್ ಮಾಡಿದ ಲೇಖನವನ್ನು ಅವರು ಉಲ್ಲೇಖಿಸಿದ್ದಾರೆ.

ಏಪ್ರಿಲ್ 3 ರಂದು ಪ್ರಕಟವಾದ ‘ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ದಿ ಕ್ಯಾಥೋಲಿಕ್ ಚರ್ಚ್ v/s ವಕ್ಫ್ ಬೋರ್ಡ್ ಡಿಬೇಟ್’ ಎಂಬ ಲೇಖನವು, “ದೇಶದಲ್ಲಿ ಭೂ ಮಾಲೀಕತ್ವದ ನಿಜವಾದ ದತ್ತಾಂಶವು ಕ್ಯಾಥೋಲಿಕ್ ಚರ್ಚ್ ವಕ್ಫ್ ಮಂಡಳಿಗಿಂತ ಅತಿದೊಡ್ಡ ಸರ್ಕಾರೇತರ ಭೂಮಾಲೀಕ” ಎಂದು ಲೇಖನದಲ್ಲಿ ಹೇಳಿಲಾಗಿದೆ.

ಲೇಖನವನ್ನು ಆಧರಿಸಿದ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ರಾಹುಲ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. “ವಕ್ಫ್ ಮಸೂದೆ ಈಗ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ. ಆರ್‌ಎಸ್‌ಎಸ್ ಕ್ರಿಶ್ಚಿಯನ್ನರ ಕಡೆಗೆ ಗಮನ ಹರಿಸಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಇಂತಹ ದಾಳಿಗಳಿಂದ ನಮ್ಮ ಜನರನ್ನು ರಕ್ಷಿಸುವ ಏಕೈಕ ಗುರಾಣಿ ಸಂವಿಧಾನ; ಅದನ್ನು ರಕ್ಷಿಸುವುದು ನಮ್ಮ ಸಾಮೂಹಿಕ ಕರ್ತವ್ಯ” ಎಂದು ಅವರು ಹೇಳಿದರು.

ಮಸೂದೆಗೆ ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ (ಸಿಬಿಸಿಐ) ಮತ್ತು ಕೇರಳ ಕ್ಯಾಥೋಲಿಕ್ ಬಿಷಪ್‌ಗಳ ಮಂಡಳಿ (ಕೆಸಿಬಿಸಿ) ಬೆಂಬಲ ನೀಡುತ್ತಿರುವುದನ್ನು ಮತ್ತು ಪರವಾಗಿ ಮತ ಚಲಾಯಿಸುವಂತೆ ಸಂಸದರಿಗೆ ಮನವಿ ಮಾಡಿರುವುದನ್ನು ಬಿಜೆಪಿ ಉಲ್ಲೇಖಿಸುತ್ತಿರುವ ಸಮಯದಲ್ಲಿ ಈ ಲೇಖನ ಬಂದಿದೆ. ವಕ್ಫ್ ಮಂಡಳಿಯು ತಮ್ಮ ಭೂಮಿಯ ಮೇಲೆ ಹಕ್ಕು ಸಾಧಿಸಿದ ನಂತರ ಸ್ಥಳಾಂತರದ ಭೀತಿ ಎದುರಿಸುತ್ತಿರುವ ಕೇರಳದ ಮುನಂಬಮ್‌ನಲ್ಲಿರುವ ಕ್ರಿಶ್ಚಿಯನ್ ಕುಟುಂಬಗಳ ಪ್ರತಿಭಟನೆಯ ನಂತರ ಈ ಮನವಿ ಬಂದಿದೆ.

‘ಆರ್ಗನೈಸರ್’ ಲೇಖನದ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಮತ್ತು ಅದರ ಸಂಸ್ಥೆಗಳು ಸುಮಾರು ಏಳು ಕೋಟಿ ಹೆಕ್ಟೇರ್ ಭೂಮಿಯನ್ನು ಹೊಂದಿದ್ದು, ಇದು ಸುಮಾರು 20,000 ಕೋಟಿ ರೂ.ಗಳ ಅಂದಾಜು ಭೂಮಿಯನ್ನು ಹೊಂದಿದೆ.

“ಸರ್ಕಾರಿ ಭೂ ಮಾಹಿತಿ ವೆಬ್‌ಸೈಟ್ ಪ್ರಕಾರ, ಫೆಬ್ರವರಿ 2021 ರ ಹೊತ್ತಿಗೆ, ಭಾರತ ಸರ್ಕಾರವು ಸುಮಾರು 15,531 ಚದರ ಕಿಲೋಮೀಟರ್ ಭೂಮಿಯನ್ನು ಹೊಂದಿತ್ತು… ವಕ್ಫ್ ಮಂಡಳಿಯು ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಭೂಭಾಗಗಳನ್ನು ಹೊಂದಿದ್ದರೂ, ಅದು ಭಾರತದಲ್ಲಿ ಕ್ಯಾಥೋಲಿಕ್ ಚರ್ಚ್‌ನ ಹಿಡುವಳಿಗಳನ್ನು ಮೀರಿಸುವುದಿಲ್ಲ” ಎಂದು ಅದು ಹೇಳಿಕೊಂಡಿದೆ.

2012 ರ ಹೊತ್ತಿಗೆ, ಕ್ಯಾಥೋಲಿಕ್ ಚರ್ಚ್ 2,457 ಆಸ್ಪತ್ರೆ ಔಷಧಾಲಯಗಳು, 240 ವೈದ್ಯಕೀಯ ಅಥವಾ ನರ್ಸಿಂಗ್ ಕಾಲೇಜುಗಳು, 28 ಸಾಮಾನ್ಯ ಕಾಲೇಜುಗಳು, 5 ಎಂಜಿನಿಯರಿಂಗ್ ಕಾಲೇಜುಗಳು, 3,765 ಮಾಧ್ಯಮಿಕ ಶಾಲೆಗಳು, 7,319 ಪ್ರಾಥಮಿಕ ಶಾಲೆಗಳು ಮತ್ತು 3,187 ನರ್ಸರಿ ಶಾಲೆಗಳನ್ನು ಹೊಂದಿತ್ತು ಎಂದು ಲೇಖನ ಹೇಳಿದೆ.

“ಅದರ ಹೆಚ್ಚಿನ ಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಯಿತು. 1927 ರಲ್ಲಿ, ಬ್ರಿಟಿಷ್ ಆಡಳಿತವು ಭಾರತೀಯ ಚರ್ಚ್ ಕಾಯ್ದೆಯನ್ನು ಅಂಗೀಕರಿಸಿತು, ಇದು ಚರ್ಚ್‌ಗೆ ದೊಡ್ಡ ಪ್ರಮಾಣದ ಭೂ ಅನುದಾನವನ್ನು ಸುಗಮಗೊಳಿಸಿತು” ಎಂದು ಅದು ಹೇಳಿದೆ.

“1965 ರಲ್ಲಿ, ಭಾರತ ಸರ್ಕಾರವು ಬ್ರಿಟಿಷ್ ಸರ್ಕಾರದಿಂದ ಗುತ್ತಿಗೆಗೆ ನೀಡಲಾದ ಯಾವುದೇ ಭೂಮಿಯನ್ನು ಇನ್ನು ಮುಂದೆ ಚರ್ಚ್ ಆಸ್ತಿ ಎಂದು ಗುರುತಿಸಲಾಗುವುದಿಲ್ಲ ಎಂದು ಹೇಳುವ ಸುತ್ತೋಲೆಯನ್ನು ಹೊರಡಿಸಿತು. ಆದರೂ, ಈ ನಿರ್ದೇಶನದ ಸಡಿಲ ಜಾರಿಯಿಂದಾಗಿ, ಕೆಲವು ಚರ್ಚ್ ಒಡೆತನದ ಭೂಮಿಗಳ ಕಾನೂನುಬದ್ಧತೆ ಬಗೆಹರಿಯದೆ ಉಳಿದಿದೆ” ಎಂದು ಅದು ಹೇಳಿದೆ.

ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...