Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...