Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...