Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...